ಆಂದೋಲನ ಪುರವಣಿ

ಬರಗಾಲದಲ್ಲಿ ಜನರಿಗೆ ನೆರವಾದ ಶ್ರೀಮಂತ, ರಾಜರಿಂದ ಬಯಸಿದ್ದೇನು ಗೊತ್ತೇ?!

10ನೇ ಚಾಮರಾಜ ಒಡೆಯರ್ ಆಳ್ವಿಕೆಯಲ್ಲಿ ನಡೆದ ಪ್ರಸಂಗ

• ಧರ್ಮೇಂದ್ರ ಕುಮಾರ್ ಮೈಸೂರು

ಮೈಸೂರು ಸಂಸ್ಥಾನವನ್ನು ಭೀಕರ ಬರಗಾಲ ಕಾಡಿತ್ತು… ಶ್ರೀಮಂತರೊಬ್ಬರು ತಾವು ಸಂಗ್ರಹಿಸಿಟ್ಟಿದ್ದ ದವಸ ಧಾನ್ಯಗಳನ್ನು ಉಚಿತವಾಗಿ ಬಡವರಿಗೆ ಹಂಚಿದರು… ಅವರ ಮಾನವೀಯ ಕಾರ್ಯವನ್ನು ಮೆಚ್ಚಿದ ಮೈಸೂರು ಮಹಾರಾಜರು ‘ನಾನು ನಿಮಗೇನಾದರೂ ಉಡುಗೊರೆ ಕೊಡಬೇಕಲ್ಲ ಎನ್ನುತ್ತಾರೆ. ಅದಕ್ಕೆ ಮಹಾದಾನಿ ಏನು ಕೇಳಿದರು ಗೊತ್ತೇ… ಅದು ಊಹೆಗೆ ನಿಲುಕದ್ದು… ಆದರೆ, ಅವರ ಉದಾರ ಹೃದಯದ ವೈಶಾಲ್ಯತೆಯ ಪ್ರತೀಕವಾಗಿತ್ತು.

10ನೇ ಚಾಮರಾಜ ಒಡೆಯರ್ 1881ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಉತ್ತರ ಭಾಗದಲ್ಲಿ ಬರಗಾಲ ತಾಂಡವವಾಡುತ್ತಿತ್ತು.

ಚಿತ್ರದುರ್ಗದ ಅತ್ಯಂತ ಶ್ರೀಮಂತ ಕಾಶಿ ಅಪ್ಪಣ್ಣ ಶೆಟ್ಟರ್ ಅವರು ತಮ್ಮಲ್ಲಿದ್ದ ನೂರಾರು ಗೋಡೌನ್‌ ಗಳಿಂದ ಚಿತ್ರದುರ್ಗದಾದ್ಯಂತ ಜನರಿಗೆ ದವಸ ಮತ್ತು ಧಾನ್ಯಗಳನ್ನು ಉಚಿತವಾಗಿ ಹಂಚುತ್ತಾರೆ.

ಒಬ್ಬ ಸಾಮಾನ್ಯ ಪ್ರಜೆ ತನ್ನಲ್ಲಿದ್ದ ಸಿರಿ ಸಂಪತ್ತನ್ನು ಬಡವರ ಕಷ್ಟಕ್ಕಾಗಿ ದಾನ ನೀಡಿದ ಎಂದು ಮಹಾರಾಜರಿಗೆ ತಿಳಿದಾಗ, ಕಾಶಿ ಅಪ್ಪಣ್ಣ ಶೆಟ್ಟರ್ ಅವರನ್ನು ನೋಡಬೇಕು ಎಂದು ಮೈಸೂರು ಸಂಸ್ಥಾನಕ್ಕೆ ಕರೆಸುತ್ತಾರೆ. ಸಂಸ್ಥಾನಕ್ಕೆ ಬಂದ ಅಪ್ಪಣ್ಣನವರಿಗೆ ಆದರಾತಿಥ್ಯ ನೀಡಿದ ಮಹಾರಾಜರು, ಇಂತಹ ಔದರ್ಯ ಮೆರೆದಿರುವ ನಿಮಗೆ ಏನು ಬೇಕು ಎಂದು ಕೇಳಿದಾಗ, ಕಾಶಿ ಅಪ್ಪಣ್ಣ ಅವರು ಕೈಮುಗಿದು ಮಹಾಸ್ವಾಮಿ ನನಗಾಗಿ ಏನೂ ಬೇಡ, ಆದರೆ ನಿಮ್ಮೊಡನೆ ಇರುವ ಒಂದು ಚಿತ್ರಪಟ
ಕಾಶಿ ಅಪ್ಪಣ್ಣ ಅವರು ಇರುವ ಚಿತ್ರಪಟ ಮಾಡಿಸಿಕೊಟ್ಟರೆ ಸಾಕು ಎಂದು ವಿನಮ್ರರಾಗಿ ಕೇಳುತ್ತಾರೆ. ಮಹಾರಾಜರು ಅರಮನೆ ಕಲಾವಿದರಿಗೆ ವರ್ಣಚಿತ್ರವನ್ನು ರಚಿಸಲು ಸೂಚಿಸುತ್ತಾರೆ. ಚಿನ್ನದ ಪದಕದೊಡನೆ ಚಿತ್ರಪಟವನ್ನೂ ಅಪ್ಪಣ್ಣ ಅವರಿಗೆ ನೀಡುತ್ತಾರೆ.

ಅವರ ನಂತರ ನಮ್ಮ ಕುಟುಂಬಸ್ಥರು ದಾನ-ಧರ್ಮಗಳ ಜೊತೆಗೆ ಟ್ರಸ್ಟ್ ಹಾಗೂ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದೇವೆ ಎಂದು ಕಾಶಿ ಅಪ್ಪಣ್ಣ ಅವರ ಮರಿ ಮೊಮ್ಮಗ ಮನೋಹರ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ 1881ರಲ್ಲಿ ಬರಗಾಲ ಬಂದಾಗ ರಾಜ್ಯದ ಪರಿಸ್ಥಿತಿಯನ್ನು ಕಂಡು ಕಾಶಿ ಅಪ್ಪಣ್ಣ ಅವರು ಬಹಳ ಜನ ಬಡವರಿಗೆ ಹಸಿವು ತಣಿಸಲು ಹಗೇವುನಲ್ಲಿದ್ದ ಧಾನ್ಯವನ್ನು ಹೊರತೆಗೆದು ಹಂಚಿರುತ್ತಾರೆ. ಈ ವಿಷಯವನ್ನು ತಿಳಿದ 10ನೇ ಚಾಮರಾಜ ಒಡೆಯರು ಅವರು ಸನ್ಮಾನಿಸಲು ಇಚ್ಚಿಸಿದಾಗ, ಕಾಶಿ ಅಪ್ಪಣ್ಣ ಅವರು ನನಗೆ ಅದೆಲ್ಲ ಬೇಡ, ಕೇವಲ ಮಹಾರಾಜರ ಜೊತೆಯಲ್ಲಿರುವ ಒಂದು ಚಿತ್ರಪಟ ಸಾಕು ಎಂದಿದ್ದರಂತೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

46 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

50 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

55 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago