ಆಂದೋಲನ ಪುರವಣಿ

ಲೈಂಗಿಕ ಆರೋಗ್ಯ : ವೆನೆರಿಯಲ್ ವಾರ್ಟ್; ನಿರ್ಲಕ್ಷ್ಯ ಬೇಡ

ಡಾ. ಬಿ.ಡಿ. ಸತ್ಯನಾರಾಯಣ,

ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು

ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ ವೈರಸ್ ಜಾತಿಯ ಕೆಲವು ತಳಿಗಳು ಈ ರೋಗಕ್ಕೆ ಕಾರಣವಾಗಿವೆ. ಇದೇ ಜಾತಿಯ ಕೆಲವು ವೈರಾಣುಗಳಿಂದ ಮಕ್ಕಳಲ್ಲಿ ಕಾಮನ್ ವಾರ್ಟ್ (ಸಾಮಾನ್ಯ ಗುಳ್ಳೆಗಳು) ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಅನೈತಿಕ ಚಟುವಟಿಕೆಯಲ್ಲಿ ಪಾಲ್ಗೊಂಡವರು, ವೇಶ್ಯೆಯರು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ.

ಪ್ರಾರಂಭದಲ್ಲಿ ರೋಗಾಣು ಶರೀರವನ್ನು ಹೊಕ್ಕಿದ ಜಾಗದಲ್ಲಿ ೩ ರಿಂದ ೮ ವಾರಗಳ ಒಳಗೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಲೈಂಗಿಕ ಅಂಗ, ಮೂತ್ರಧ್ವಾರ, ಮಲಧ್ವಾರದ ಅಕ್ಕಪಕ್ಕದಲ್ಲಿ ಒರಟಾದ ಸಣ್ಣ ಸಣ್ಣ ವಾರ್ಟ್‌ಗಳು (ಗುಳ್ಳೆಗಳು) ಕಾಣಿಸಿಕೊಳ್ಳುತ್ತವೆ. ಇವುಗಳು ಯಾರುವೇ ರೀತಿಯ ನೋವು ಉಂಟು ಮಾಡುವುದಿಲ್ಲ. ಹಾಗೆಂದು ಇವುಗಳನ್ನು ನಿರ್ಲಕ್ಷ್ಯ ಮಾಡಿದರೆ ಗುಳ್ಳೆಗಳ ಗಾತ್ರ ನಿಧಾನವಾಗಿ ಹೆಚ್ಚಾಗುತ್ತಾ ಹೋಗುತ್ತದೆ. ನಂತರ ಸಣ್ಣ ಸಣ್ಣ ಗುಳ್ಳೆಗಳು ಕೂಡಿಕೊಂಡು ಗೋಲಿಯಷ್ಟು ಗಾತ್ರಕ್ಕೆ ತಿರುಗುತ್ತವೆ. ಕೆಲವರಲ್ಲಿ ಟೆನ್ನಿಸ್ ಬಾಲ್‌ನಷ್ಟು ದಪ್ಪಕ್ಕೆ ತಿರುಗಿದ ಉದಾಹರಣೆಗಳೂ ಇವೆ.

ಪ್ರಾರಂಭಿಕ ಹಂತದಲ್ಲೇ ಇವುಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ತೆಗೆದುಕೊಂಡರೆ ಅಪಾಯ ಇಲ್ಲ. ಇಲ್ಲದೇ ಇದ್ದರೆ ಇದು ಮುಂದೆ ಕ್ಯಾನ್ಸರ್‌ಗೆ ತಿರುಗಿ ಪ್ರಾಣಕ್ಕೂ ಅಪಾಯ ತರಬಹುದು.

ಗುಳ್ಳೆಗಳು ಒಂದೆರಡು ಸೆ.ಮೀ. ನಷ್ಟು ಸಣ್ಣದಿರುವಾಗಲೇ ಪೋಡೋಫಿಲನ್ ಕಾಟರಿ ಶಸ್ತ್ರಚಿಕಿತ್ಸೆ ಅಥವಾ ಕ್ರಯೋತಿರಿಪಿಯಿಂದ ಇವುಗಳನ್ನು ಗುಣಪಡಿಸಬಹುದು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

5 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

6 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

6 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

7 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

7 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

8 hours ago