ಆಂದೋಲನ ಪುರವಣಿ

ಲೈಂಗಿಕ ಆರೋಗ್ಯ : ವೆನೆರಿಯಲ್ ವಾರ್ಟ್; ನಿರ್ಲಕ್ಷ್ಯ ಬೇಡ

ಡಾ. ಬಿ.ಡಿ. ಸತ್ಯನಾರಾಯಣ,

ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು

ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ ವೈರಸ್ ಜಾತಿಯ ಕೆಲವು ತಳಿಗಳು ಈ ರೋಗಕ್ಕೆ ಕಾರಣವಾಗಿವೆ. ಇದೇ ಜಾತಿಯ ಕೆಲವು ವೈರಾಣುಗಳಿಂದ ಮಕ್ಕಳಲ್ಲಿ ಕಾಮನ್ ವಾರ್ಟ್ (ಸಾಮಾನ್ಯ ಗುಳ್ಳೆಗಳು) ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಅನೈತಿಕ ಚಟುವಟಿಕೆಯಲ್ಲಿ ಪಾಲ್ಗೊಂಡವರು, ವೇಶ್ಯೆಯರು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ.

ಪ್ರಾರಂಭದಲ್ಲಿ ರೋಗಾಣು ಶರೀರವನ್ನು ಹೊಕ್ಕಿದ ಜಾಗದಲ್ಲಿ ೩ ರಿಂದ ೮ ವಾರಗಳ ಒಳಗೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಲೈಂಗಿಕ ಅಂಗ, ಮೂತ್ರಧ್ವಾರ, ಮಲಧ್ವಾರದ ಅಕ್ಕಪಕ್ಕದಲ್ಲಿ ಒರಟಾದ ಸಣ್ಣ ಸಣ್ಣ ವಾರ್ಟ್‌ಗಳು (ಗುಳ್ಳೆಗಳು) ಕಾಣಿಸಿಕೊಳ್ಳುತ್ತವೆ. ಇವುಗಳು ಯಾರುವೇ ರೀತಿಯ ನೋವು ಉಂಟು ಮಾಡುವುದಿಲ್ಲ. ಹಾಗೆಂದು ಇವುಗಳನ್ನು ನಿರ್ಲಕ್ಷ್ಯ ಮಾಡಿದರೆ ಗುಳ್ಳೆಗಳ ಗಾತ್ರ ನಿಧಾನವಾಗಿ ಹೆಚ್ಚಾಗುತ್ತಾ ಹೋಗುತ್ತದೆ. ನಂತರ ಸಣ್ಣ ಸಣ್ಣ ಗುಳ್ಳೆಗಳು ಕೂಡಿಕೊಂಡು ಗೋಲಿಯಷ್ಟು ಗಾತ್ರಕ್ಕೆ ತಿರುಗುತ್ತವೆ. ಕೆಲವರಲ್ಲಿ ಟೆನ್ನಿಸ್ ಬಾಲ್‌ನಷ್ಟು ದಪ್ಪಕ್ಕೆ ತಿರುಗಿದ ಉದಾಹರಣೆಗಳೂ ಇವೆ.

ಪ್ರಾರಂಭಿಕ ಹಂತದಲ್ಲೇ ಇವುಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ತೆಗೆದುಕೊಂಡರೆ ಅಪಾಯ ಇಲ್ಲ. ಇಲ್ಲದೇ ಇದ್ದರೆ ಇದು ಮುಂದೆ ಕ್ಯಾನ್ಸರ್‌ಗೆ ತಿರುಗಿ ಪ್ರಾಣಕ್ಕೂ ಅಪಾಯ ತರಬಹುದು.

ಗುಳ್ಳೆಗಳು ಒಂದೆರಡು ಸೆ.ಮೀ. ನಷ್ಟು ಸಣ್ಣದಿರುವಾಗಲೇ ಪೋಡೋಫಿಲನ್ ಕಾಟರಿ ಶಸ್ತ್ರಚಿಕಿತ್ಸೆ ಅಥವಾ ಕ್ರಯೋತಿರಿಪಿಯಿಂದ ಇವುಗಳನ್ನು ಗುಣಪಡಿಸಬಹುದು.

andolanait

Recent Posts

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

1 min ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

25 mins ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

2 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

2 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

2 hours ago