ಆಂದೋಲನ ಪುರವಣಿ

ಲೈಂಗಿಕ ಆರೋಗ್ಯ : ವೆನೆರಿಯಲ್ ವಾರ್ಟ್; ನಿರ್ಲಕ್ಷ್ಯ ಬೇಡ

ಡಾ. ಬಿ.ಡಿ. ಸತ್ಯನಾರಾಯಣ,

ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು

ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ ವೈರಸ್ ಜಾತಿಯ ಕೆಲವು ತಳಿಗಳು ಈ ರೋಗಕ್ಕೆ ಕಾರಣವಾಗಿವೆ. ಇದೇ ಜಾತಿಯ ಕೆಲವು ವೈರಾಣುಗಳಿಂದ ಮಕ್ಕಳಲ್ಲಿ ಕಾಮನ್ ವಾರ್ಟ್ (ಸಾಮಾನ್ಯ ಗುಳ್ಳೆಗಳು) ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಅನೈತಿಕ ಚಟುವಟಿಕೆಯಲ್ಲಿ ಪಾಲ್ಗೊಂಡವರು, ವೇಶ್ಯೆಯರು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ.

ಪ್ರಾರಂಭದಲ್ಲಿ ರೋಗಾಣು ಶರೀರವನ್ನು ಹೊಕ್ಕಿದ ಜಾಗದಲ್ಲಿ ೩ ರಿಂದ ೮ ವಾರಗಳ ಒಳಗೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಲೈಂಗಿಕ ಅಂಗ, ಮೂತ್ರಧ್ವಾರ, ಮಲಧ್ವಾರದ ಅಕ್ಕಪಕ್ಕದಲ್ಲಿ ಒರಟಾದ ಸಣ್ಣ ಸಣ್ಣ ವಾರ್ಟ್‌ಗಳು (ಗುಳ್ಳೆಗಳು) ಕಾಣಿಸಿಕೊಳ್ಳುತ್ತವೆ. ಇವುಗಳು ಯಾರುವೇ ರೀತಿಯ ನೋವು ಉಂಟು ಮಾಡುವುದಿಲ್ಲ. ಹಾಗೆಂದು ಇವುಗಳನ್ನು ನಿರ್ಲಕ್ಷ್ಯ ಮಾಡಿದರೆ ಗುಳ್ಳೆಗಳ ಗಾತ್ರ ನಿಧಾನವಾಗಿ ಹೆಚ್ಚಾಗುತ್ತಾ ಹೋಗುತ್ತದೆ. ನಂತರ ಸಣ್ಣ ಸಣ್ಣ ಗುಳ್ಳೆಗಳು ಕೂಡಿಕೊಂಡು ಗೋಲಿಯಷ್ಟು ಗಾತ್ರಕ್ಕೆ ತಿರುಗುತ್ತವೆ. ಕೆಲವರಲ್ಲಿ ಟೆನ್ನಿಸ್ ಬಾಲ್‌ನಷ್ಟು ದಪ್ಪಕ್ಕೆ ತಿರುಗಿದ ಉದಾಹರಣೆಗಳೂ ಇವೆ.

ಪ್ರಾರಂಭಿಕ ಹಂತದಲ್ಲೇ ಇವುಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ತೆಗೆದುಕೊಂಡರೆ ಅಪಾಯ ಇಲ್ಲ. ಇಲ್ಲದೇ ಇದ್ದರೆ ಇದು ಮುಂದೆ ಕ್ಯಾನ್ಸರ್‌ಗೆ ತಿರುಗಿ ಪ್ರಾಣಕ್ಕೂ ಅಪಾಯ ತರಬಹುದು.

ಗುಳ್ಳೆಗಳು ಒಂದೆರಡು ಸೆ.ಮೀ. ನಷ್ಟು ಸಣ್ಣದಿರುವಾಗಲೇ ಪೋಡೋಫಿಲನ್ ಕಾಟರಿ ಶಸ್ತ್ರಚಿಕಿತ್ಸೆ ಅಥವಾ ಕ್ರಯೋತಿರಿಪಿಯಿಂದ ಇವುಗಳನ್ನು ಗುಣಪಡಿಸಬಹುದು.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

57 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

60 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago