ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಳದಳ್ಳಿಯಲ್ಲಿ ಹುಟ್ಟಿದ ವ್ಯಕ್ತಿಯೊಬ್ಬ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ. ಅವನ ಹೆಸರು ಶಿವಕುಮಾರ್. ಈ ಹೆಸರು ಹೇಳಿದರೆ ಯಾರಿರಬಹುದು ಎನ್ನುವ ಪ್ರಶ್ನೆ ಹುಟ್ಟುತ್ತದೆ. ಆದರೆ ಸತೀಶ್ ನೀನಾಸಂ ಎಂದರೆ ತಟ್ಟನೆ ಅವರ ನಟನೆಯ ಶೈಲಿ ಕಣ್ಣಮುಂದೆ ಬಂದು ನಿಲ್ಲುತ್ತದೆ.
ಓದಿನಲ್ಲಿ ಆಸಕ್ತಿ ಇಲ್ಲದ ಸತೀಶ್ ಮನೆ, ಮಠವನ್ನೆಲ್ಲಾ ಬಿಟ್ಟು ಸಿನಿಮಾ ಆಸಕ್ತಿಯಿಂದ ಬೆಂಗಳೂರಿಗೆ ಬಂದವರು. ಮೊದಲಿಗೇ ಥಿಯೇಟರ್ನಲ್ಲಿಯೇ ಕೆಲಸ, ಟೀ ಅಂಗಡಿಯಲ್ಲಿ ಡ್ಯೂಟಿ, ಬಸ್ಗಳ ಸರ್ವೀಸ್, ಡೆಕೋರೇಷನ್ ಕೆಲಸ ಹೀಗೆ ನೈಜ ಬದುಕಿನಲ್ಲಿ ಹಲವು ಪಾತ್ರಗಳನ್ನು ಮಾಡುತ್ತಾ ಬಂದ ಸತೀಶ್ ನಂತರ ಸೇರಿದ್ದು ನೀಲಕಂಠೇಶ್ವರ ನಾಟ್ಯ ಸಂಘ (ನೀನಾಸಂ). ಅದಾದ ಮೇಲೆ ಅವರು ಕೇವಲ ಸತೀಶ್ ಆಗಿ ಉಳಿಯದೇ ಸತೀಶ್ ನೀನಾಸಂ ಆದರು.
ಮಾದೇಶ, ಮನಸಾರೆ, ಲೈಫ್ ಇಷ್ಟೇನೇ, ಪಂಚರಂಗಿ ಚಿತ್ರಗಳಲ್ಲಿ ಸಣ್ಣ ಪಾತ್ರ ಮಾಡಿದ ಇವರು ನಂತರ ಲೂಸಿಯಾ ಮೂಲಕ ನಾಯಕನಾಗಿ ಎಂಟ್ರಿಕೊಟ್ಟರು. ಅದಾದ ಮೇಲೆ ಅವರು ಮಾಡಿದ ಪಾತ್ರಗಳೆಲ್ಲವೂ ಕನ್ನಡಿಗರೆಲ್ಲರಿಗೂ ಚಿರಪರಿಚಿತ. ರಂಗಭೂಮಿ ಹಿನ್ನೆಲೆಯಿಂದ ಬಂದು ತಮ್ಮ ವಿಶೇಷ ಮ್ಯಾನರಿಸಂನಿಂದ ಹೆಸರಾದ ಸತೀಶ್ ನೀನಾಸಂ ಅಯೋಗ್ಯ, ಡ್ರಾಮಾ, ಲವ್ ಇನ್ ಮಂಡ್ಯ ಸೇರಿ ಹಲವು ಟರ್ನಿಂಗ್ ಪಾಯಿಂಟ್ಗಳಲ್ಲಿ ಗೆದ್ದವರು.
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…