ಆಂದೋಲನ ಪುರವಣಿ

ಶಿವಕುಮಾರ್ ಟು ಸತೀಶ್ ನೀನಾಸಂ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಳದಳ್ಳಿಯಲ್ಲಿ ಹುಟ್ಟಿದ ವ್ಯಕ್ತಿಯೊಬ್ಬ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ. ಅವನ ಹೆಸರು ಶಿವಕುಮಾರ್. ಈ ಹೆಸರು ಹೇಳಿದರೆ ಯಾರಿರಬಹುದು ಎನ್ನುವ ಪ್ರಶ್ನೆ ಹುಟ್ಟುತ್ತದೆ. ಆದರೆ ಸತೀಶ್ ನೀನಾಸಂ ಎಂದರೆ ತಟ್ಟನೆ ಅವರ ನಟನೆಯ ಶೈಲಿ ಕಣ್ಣಮುಂದೆ ಬಂದು ನಿಲ್ಲುತ್ತದೆ.

ಓದಿನಲ್ಲಿ ಆಸಕ್ತಿ ಇಲ್ಲದ ಸತೀಶ್ ಮನೆ, ಮಠವನ್ನೆಲ್ಲಾ ಬಿಟ್ಟು ಸಿನಿಮಾ ಆಸಕ್ತಿಯಿಂದ ಬೆಂಗಳೂರಿಗೆ ಬಂದವರು. ಮೊದಲಿಗೇ ಥಿಯೇಟರ್‌ನಲ್ಲಿಯೇ ಕೆಲಸ, ಟೀ ಅಂಗಡಿಯಲ್ಲಿ ಡ್ಯೂಟಿ, ಬಸ್‌ಗಳ ಸರ್ವೀಸ್, ಡೆಕೋರೇಷನ್ ಕೆಲಸ ಹೀಗೆ ನೈಜ ಬದುಕಿನಲ್ಲಿ ಹಲವು ಪಾತ್ರಗಳನ್ನು ಮಾಡುತ್ತಾ ಬಂದ ಸತೀಶ್ ನಂತರ ಸೇರಿದ್ದು ನೀಲಕಂಠೇಶ್ವರ ನಾಟ್ಯ ಸಂಘ (ನೀನಾಸಂ). ಅದಾದ ಮೇಲೆ ಅವರು ಕೇವಲ ಸತೀಶ್ ಆಗಿ ಉಳಿಯದೇ ಸತೀಶ್ ನೀನಾಸಂ ಆದರು.

ಮಾದೇಶ, ಮನಸಾರೆ, ಲೈಫ್ ಇಷ್ಟೇನೇ, ಪಂಚರಂಗಿ ಚಿತ್ರಗಳಲ್ಲಿ ಸಣ್ಣ ಪಾತ್ರ ಮಾಡಿದ ಇವರು ನಂತರ ಲೂಸಿಯಾ ಮೂಲಕ ನಾಯಕನಾಗಿ ಎಂಟ್ರಿಕೊಟ್ಟರು. ಅದಾದ ಮೇಲೆ ಅವರು ಮಾಡಿದ ಪಾತ್ರಗಳೆಲ್ಲವೂ ಕನ್ನಡಿಗರೆಲ್ಲರಿಗೂ ಚಿರಪರಿಚಿತ. ರಂಗಭೂಮಿ ಹಿನ್ನೆಲೆಯಿಂದ ಬಂದು ತಮ್ಮ ವಿಶೇಷ ಮ್ಯಾನರಿಸಂನಿಂದ ಹೆಸರಾದ ಸತೀಶ್ ನೀನಾಸಂ ಅಯೋಗ್ಯ, ಡ್ರಾಮಾ, ಲವ್ ಇನ್ ಮಂಡ್ಯ ಸೇರಿ ಹಲವು ಟರ್ನಿಂಗ್ ಪಾಯಿಂಟ್‌ಗಳಲ್ಲಿ ಗೆದ್ದವರು.

andolana

Recent Posts

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

8 mins ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

49 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

3 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

3 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

3 hours ago