ಆಂದೋಲನ ಪುರವಣಿ

ಶಿವಕುಮಾರ್ ಟು ಸತೀಶ್ ನೀನಾಸಂ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಳದಳ್ಳಿಯಲ್ಲಿ ಹುಟ್ಟಿದ ವ್ಯಕ್ತಿಯೊಬ್ಬ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ. ಅವನ ಹೆಸರು ಶಿವಕುಮಾರ್. ಈ ಹೆಸರು ಹೇಳಿದರೆ ಯಾರಿರಬಹುದು ಎನ್ನುವ ಪ್ರಶ್ನೆ ಹುಟ್ಟುತ್ತದೆ. ಆದರೆ ಸತೀಶ್ ನೀನಾಸಂ ಎಂದರೆ ತಟ್ಟನೆ ಅವರ ನಟನೆಯ ಶೈಲಿ ಕಣ್ಣಮುಂದೆ ಬಂದು ನಿಲ್ಲುತ್ತದೆ.

ಓದಿನಲ್ಲಿ ಆಸಕ್ತಿ ಇಲ್ಲದ ಸತೀಶ್ ಮನೆ, ಮಠವನ್ನೆಲ್ಲಾ ಬಿಟ್ಟು ಸಿನಿಮಾ ಆಸಕ್ತಿಯಿಂದ ಬೆಂಗಳೂರಿಗೆ ಬಂದವರು. ಮೊದಲಿಗೇ ಥಿಯೇಟರ್‌ನಲ್ಲಿಯೇ ಕೆಲಸ, ಟೀ ಅಂಗಡಿಯಲ್ಲಿ ಡ್ಯೂಟಿ, ಬಸ್‌ಗಳ ಸರ್ವೀಸ್, ಡೆಕೋರೇಷನ್ ಕೆಲಸ ಹೀಗೆ ನೈಜ ಬದುಕಿನಲ್ಲಿ ಹಲವು ಪಾತ್ರಗಳನ್ನು ಮಾಡುತ್ತಾ ಬಂದ ಸತೀಶ್ ನಂತರ ಸೇರಿದ್ದು ನೀಲಕಂಠೇಶ್ವರ ನಾಟ್ಯ ಸಂಘ (ನೀನಾಸಂ). ಅದಾದ ಮೇಲೆ ಅವರು ಕೇವಲ ಸತೀಶ್ ಆಗಿ ಉಳಿಯದೇ ಸತೀಶ್ ನೀನಾಸಂ ಆದರು.

ಮಾದೇಶ, ಮನಸಾರೆ, ಲೈಫ್ ಇಷ್ಟೇನೇ, ಪಂಚರಂಗಿ ಚಿತ್ರಗಳಲ್ಲಿ ಸಣ್ಣ ಪಾತ್ರ ಮಾಡಿದ ಇವರು ನಂತರ ಲೂಸಿಯಾ ಮೂಲಕ ನಾಯಕನಾಗಿ ಎಂಟ್ರಿಕೊಟ್ಟರು. ಅದಾದ ಮೇಲೆ ಅವರು ಮಾಡಿದ ಪಾತ್ರಗಳೆಲ್ಲವೂ ಕನ್ನಡಿಗರೆಲ್ಲರಿಗೂ ಚಿರಪರಿಚಿತ. ರಂಗಭೂಮಿ ಹಿನ್ನೆಲೆಯಿಂದ ಬಂದು ತಮ್ಮ ವಿಶೇಷ ಮ್ಯಾನರಿಸಂನಿಂದ ಹೆಸರಾದ ಸತೀಶ್ ನೀನಾಸಂ ಅಯೋಗ್ಯ, ಡ್ರಾಮಾ, ಲವ್ ಇನ್ ಮಂಡ್ಯ ಸೇರಿ ಹಲವು ಟರ್ನಿಂಗ್ ಪಾಯಿಂಟ್‌ಗಳಲ್ಲಿ ಗೆದ್ದವರು.

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

19 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago