ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ ಸಂಯುಕ್ತ ಹೊರನಾಡು ನಟಿಸುತ್ತಿದ್ದಾರೆ ಎಂದಿರುವ ತಂಡ, ಅವರ ಮೊದಲ ನೋಟವನ್ನೂ ಬಿಡುಗಡೆ ಮಾಡಿದ್ದಾರೆ. ಪ್ರೇಮಕಥೆಯಲ್ಲಿ ವಕೀಲರಿಗೇನು ಕೆಲಸ ಎನ್ನುವ ಪ್ರಶ್ನೆ ಸಹಜ. ಇನ್ನೇನಿರುತ್ತದೆ, ಮದುವೆಯಾಗಿದ್ದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ವಿಚ್ಛೇದನಕ್ಕೆ ನೆರವು ಪಡೆಯಲು ಅವರಲ್ಲೊಬ್ಬರು ಈಕೆಯನ್ನು ಸಂಪರ್ಕಿಸಬಹುದು, ಇಲ್ಲವೇ ಯಾವುದಾದರೂ ತಮ್ಮದಲ್ಲದ ತಪ್ಪಿಗೆ ಸಿಕ್ಕಿಹಾಕಿಕೊಂಡು ಬಿಡಿಸಲು ನೆರವು ಕೇಳಬಹುದು. ಪ್ರೇಮಿಗಳಿಬ್ಬರ ಗೆಳತಿಯೂ ಆಗಿರುವ ಈ ವಕೀಲೆಯದು ಯಾರಿಗೂ ಅಂಜದ ದಿಟ್ಟ ಹುಡುಗಿಯ, ಕೈಗೆತ್ತಿಕೊಂಡ ಎಲ್ಲ ಕೇಸ್ಗಳನ್ನೂ ಗೆಲ್ಲುವ ಛಾತಿಯುಳ್ಳ ಪಾತ್ರ ಎನ್ನುವುದು ನಿರ್ದೇಶಕರ ಅಂಬೋಣ. ?ಲವ್ಬರ್ಡ್ಸ್’ಗೆ ಈ ವಕೀಲೆ ಅದೇನು ಕಾನೂನು ನೆರವು ನೀಡುತ್ತಾರೆ ಎನ್ನುವುದನ್ನು, ಇನ್ನೇನು ತೆರೆಗೆ ಬರಲಿರುವ ಚಿತ್ರ ಹೇಳಲಿದೆ!
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…