ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ ಸಂಯುಕ್ತ ಹೊರನಾಡು ನಟಿಸುತ್ತಿದ್ದಾರೆ ಎಂದಿರುವ ತಂಡ, ಅವರ ಮೊದಲ ನೋಟವನ್ನೂ ಬಿಡುಗಡೆ ಮಾಡಿದ್ದಾರೆ. ಪ್ರೇಮಕಥೆಯಲ್ಲಿ ವಕೀಲರಿಗೇನು ಕೆಲಸ ಎನ್ನುವ ಪ್ರಶ್ನೆ ಸಹಜ. ಇನ್ನೇನಿರುತ್ತದೆ, ಮದುವೆಯಾಗಿದ್ದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ವಿಚ್ಛೇದನಕ್ಕೆ ನೆರವು ಪಡೆಯಲು ಅವರಲ್ಲೊಬ್ಬರು ಈಕೆಯನ್ನು ಸಂಪರ್ಕಿಸಬಹುದು, ಇಲ್ಲವೇ ಯಾವುದಾದರೂ ತಮ್ಮದಲ್ಲದ ತಪ್ಪಿಗೆ ಸಿಕ್ಕಿಹಾಕಿಕೊಂಡು ಬಿಡಿಸಲು ನೆರವು ಕೇಳಬಹುದು. ಪ್ರೇಮಿಗಳಿಬ್ಬರ ಗೆಳತಿಯೂ ಆಗಿರುವ ಈ ವಕೀಲೆಯದು ಯಾರಿಗೂ ಅಂಜದ ದಿಟ್ಟ ಹುಡುಗಿಯ, ಕೈಗೆತ್ತಿಕೊಂಡ ಎಲ್ಲ ಕೇಸ್ಗಳನ್ನೂ ಗೆಲ್ಲುವ ಛಾತಿಯುಳ್ಳ ಪಾತ್ರ ಎನ್ನುವುದು ನಿರ್ದೇಶಕರ ಅಂಬೋಣ. ?ಲವ್ಬರ್ಡ್ಸ್’ಗೆ ಈ ವಕೀಲೆ ಅದೇನು ಕಾನೂನು ನೆರವು ನೀಡುತ್ತಾರೆ ಎನ್ನುವುದನ್ನು, ಇನ್ನೇನು ತೆರೆಗೆ ಬರಲಿರುವ ಚಿತ್ರ ಹೇಳಲಿದೆ!
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…