ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ ಸಂಯುಕ್ತ ಹೊರನಾಡು ನಟಿಸುತ್ತಿದ್ದಾರೆ ಎಂದಿರುವ ತಂಡ, ಅವರ ಮೊದಲ ನೋಟವನ್ನೂ ಬಿಡುಗಡೆ ಮಾಡಿದ್ದಾರೆ. ಪ್ರೇಮಕಥೆಯಲ್ಲಿ ವಕೀಲರಿಗೇನು ಕೆಲಸ ಎನ್ನುವ ಪ್ರಶ್ನೆ ಸಹಜ. ಇನ್ನೇನಿರುತ್ತದೆ, ಮದುವೆಯಾಗಿದ್ದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ವಿಚ್ಛೇದನಕ್ಕೆ ನೆರವು ಪಡೆಯಲು ಅವರಲ್ಲೊಬ್ಬರು ಈಕೆಯನ್ನು ಸಂಪರ್ಕಿಸಬಹುದು, ಇಲ್ಲವೇ ಯಾವುದಾದರೂ ತಮ್ಮದಲ್ಲದ ತಪ್ಪಿಗೆ ಸಿಕ್ಕಿಹಾಕಿಕೊಂಡು ಬಿಡಿಸಲು ನೆರವು ಕೇಳಬಹುದು. ಪ್ರೇಮಿಗಳಿಬ್ಬರ ಗೆಳತಿಯೂ ಆಗಿರುವ ಈ ವಕೀಲೆಯದು ಯಾರಿಗೂ ಅಂಜದ ದಿಟ್ಟ ಹುಡುಗಿಯ, ಕೈಗೆತ್ತಿಕೊಂಡ ಎಲ್ಲ ಕೇಸ್ಗಳನ್ನೂ ಗೆಲ್ಲುವ ಛಾತಿಯುಳ್ಳ ಪಾತ್ರ ಎನ್ನುವುದು ನಿರ್ದೇಶಕರ ಅಂಬೋಣ. ?ಲವ್ಬರ್ಡ್ಸ್’ಗೆ ಈ ವಕೀಲೆ ಅದೇನು ಕಾನೂನು ನೆರವು ನೀಡುತ್ತಾರೆ ಎನ್ನುವುದನ್ನು, ಇನ್ನೇನು ತೆರೆಗೆ ಬರಲಿರುವ ಚಿತ್ರ ಹೇಳಲಿದೆ!
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…