ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ ಸಂಯುಕ್ತ ಹೊರನಾಡು ನಟಿಸುತ್ತಿದ್ದಾರೆ ಎಂದಿರುವ ತಂಡ, ಅವರ ಮೊದಲ ನೋಟವನ್ನೂ ಬಿಡುಗಡೆ ಮಾಡಿದ್ದಾರೆ. ಪ್ರೇಮಕಥೆಯಲ್ಲಿ ವಕೀಲರಿಗೇನು ಕೆಲಸ ಎನ್ನುವ ಪ್ರಶ್ನೆ ಸಹಜ. ಇನ್ನೇನಿರುತ್ತದೆ, ಮದುವೆಯಾಗಿದ್ದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ವಿಚ್ಛೇದನಕ್ಕೆ ನೆರವು ಪಡೆಯಲು ಅವರಲ್ಲೊಬ್ಬರು ಈಕೆಯನ್ನು ಸಂಪರ್ಕಿಸಬಹುದು, ಇಲ್ಲವೇ ಯಾವುದಾದರೂ ತಮ್ಮದಲ್ಲದ ತಪ್ಪಿಗೆ ಸಿಕ್ಕಿಹಾಕಿಕೊಂಡು ಬಿಡಿಸಲು ನೆರವು ಕೇಳಬಹುದು. ಪ್ರೇಮಿಗಳಿಬ್ಬರ ಗೆಳತಿಯೂ ಆಗಿರುವ ಈ ವಕೀಲೆಯದು ಯಾರಿಗೂ ಅಂಜದ ದಿಟ್ಟ ಹುಡುಗಿಯ, ಕೈಗೆತ್ತಿಕೊಂಡ ಎಲ್ಲ ಕೇಸ್ಗಳನ್ನೂ ಗೆಲ್ಲುವ ಛಾತಿಯುಳ್ಳ ಪಾತ್ರ ಎನ್ನುವುದು ನಿರ್ದೇಶಕರ ಅಂಬೋಣ. ?ಲವ್ಬರ್ಡ್ಸ್’ಗೆ ಈ ವಕೀಲೆ ಅದೇನು ಕಾನೂನು ನೆರವು ನೀಡುತ್ತಾರೆ ಎನ್ನುವುದನ್ನು, ಇನ್ನೇನು ತೆರೆಗೆ ಬರಲಿರುವ ಚಿತ್ರ ಹೇಳಲಿದೆ!
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…