ಆಂದೋಲನ ಪುರವಣಿ

ಸಿನಿಮಾಲ್‌ : ಲಾಯರ್ ಆಗಿ ಸಂಯುಕ್ತ ಹೊರನಾಡು

ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ ಸಂಯುಕ್ತ ಹೊರನಾಡು ನಟಿಸುತ್ತಿದ್ದಾರೆ ಎಂದಿರುವ ತಂಡ, ಅವರ ಮೊದಲ ನೋಟವನ್ನೂ ಬಿಡುಗಡೆ ಮಾಡಿದ್ದಾರೆ. ಪ್ರೇಮಕಥೆಯಲ್ಲಿ ವಕೀಲರಿಗೇನು ಕೆಲಸ ಎನ್ನುವ ಪ್ರಶ್ನೆ ಸಹಜ. ಇನ್ನೇನಿರುತ್ತದೆ, ಮದುವೆಯಾಗಿದ್ದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ವಿಚ್ಛೇದನಕ್ಕೆ ನೆರವು ಪಡೆಯಲು ಅವರಲ್ಲೊಬ್ಬರು ಈಕೆಯನ್ನು ಸಂಪರ್ಕಿಸಬಹುದು, ಇಲ್ಲವೇ ಯಾವುದಾದರೂ ತಮ್ಮದಲ್ಲದ ತಪ್ಪಿಗೆ ಸಿಕ್ಕಿಹಾಕಿಕೊಂಡು ಬಿಡಿಸಲು ನೆರವು ಕೇಳಬಹುದು. ಪ್ರೇಮಿಗಳಿಬ್ಬರ ಗೆಳತಿಯೂ ಆಗಿರುವ ಈ ವಕೀಲೆಯದು ಯಾರಿಗೂ ಅಂಜದ ದಿಟ್ಟ ಹುಡುಗಿಯ, ಕೈಗೆತ್ತಿಕೊಂಡ ಎಲ್ಲ ಕೇಸ್‌ಗಳನ್ನೂ ಗೆಲ್ಲುವ ಛಾತಿಯುಳ್ಳ ಪಾತ್ರ ಎನ್ನುವುದು ನಿರ್ದೇಶಕರ ಅಂಬೋಣ. ?ಲವ್‌ಬರ್ಡ್ಸ್’ಗೆ ಈ ವಕೀಲೆ ಅದೇನು ಕಾನೂನು ನೆರವು ನೀಡುತ್ತಾರೆ ಎನ್ನುವುದನ್ನು, ಇನ್ನೇನು ತೆರೆಗೆ ಬರಲಿರುವ ಚಿತ್ರ ಹೇಳಲಿದೆ!

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago