ಆಂದೋಲನ ಪುರವಣಿ

ಸಿನಿಮಾಲ್‌ : ‘ಗಾಳಿಪಟ 2’, ‘ಬನಾರಸ್’ ಚಿತ್ರದ ಹಾಡುಗಳು

ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.

‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.

‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.

andolana

Recent Posts

ನವೀಕರಣಗೊಂಡು ಕಂಗೊಳಿಸುತ್ತಿರುವ ಅಂಬೇಡ್ಕರ್ ಭವನ

ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ  ಎಚ್.ಡಿ.ಕೋಟೆ:…

3 mins ago

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago