ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.
‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.
‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…