ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.
‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.
‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…