ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, ಜನಪ್ರಿಯ ನಟರ ಚಿತ್ರಗಳು ಸಾಕಷ್ಟು ಮೊದಲೇ ಬಿಡುಗಡೆ ದಿನಾಂಕ ನಿರ್ಧರಿಸಿ, ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಕಳೆದ ವಾರ ‘ಗಾಳಿಪಟ ೨’ ಮತ್ತು ‘ಬನಾರಸ್’ ಚಿತ್ರಗಳ ಒಂದೊಂದು ಹಾಡು ಲೋಕಾರ್ಪಣೆಯಾಯಿತು.
‘ಗಾಳಿಪಟ ೨’ ರಮೇಶ್ ರೆಡ್ಡಿ ಅವರಿಗಾಗಿ ೋಂಗರಾಜ್ ಭಟ್ ನಿರ್ದೇಶಿಸಿರುವ ಚಿತ್ರ. ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾ ರಾವ್ ಮುಂತಾದವರು ನಟಿಸಿರುವ ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಬರೆದಿರುವ ‘ನೀನು ಬಗೆಹರಿಯದ ಹಾಡು…’ ಎಂದು ಆರಂಭವಾಗುವ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ರಾಗ ಸಂೋಂಜಿಸಿ, ನಿಹಾಲ್ ತಾವ್ರೋ ಹಾಡಿರುವ ಈ ಹಾಡಿನಲ್ಲಿ ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ. ಧನು ನೃತ್ಯಸಂೋಂಜನೆಗೆ ಛಾಯಾಗ್ರಹಣ ಸಂತೋಷ್ ರೈ ಪಾತಾಜೆ ಅವರದು.
‘ಬನಾರಸ್’ ಚಿತ್ರದಲ್ಲಿ ‘ಹೆಣ್ಣು ಹಡೆಯಲು ಬ್ಯಾಡಾ’ ಜನಪ್ರಿಯ ಜಾನಪದ ಗೀತೆಯನ್ನು ಬಳಸಿಕೊಳ್ಳಲಾಗಿದೆ. ಈ ಗೀತೆಗೆ ಅಜನೀಶ್ ಲೋಕನಾಥ್ ರಾಗ ಸಂೋಂಜಿಸಿದ್ದು, ಹರ್ಷಿಕಾ ದೇವನಾಥ್ ಹಾಡಿದ್ದಾರೆ. ತಿಲಕ್ ಬಲ್ಲಾಳ್ ನಿರ್ಮಾಣದ ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದು, ಝೈದ್ ಖಾನ್ ಈ ಚಿತ್ರದ ಮೂಲಕ ಚಿತ್ರರಸಿಕರಿಗೆ ಪರಿಚಯವಾಗಲಿದ್ದಾರೆ. ಈ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಿಗೆ ಡಬ್ ಆಗಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…