ಆಂದೋಲನ ಪುರವಣಿ

ಸಿನಿಮಾಲ್‌ : ಸಾಯಿಪ್ರಕಾಶ್ 100 : ‘ಶ್ರೀ ಸತ್ಯಸಾಯಿ ಅವತಾರ’

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

4 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

4 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

5 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

5 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

5 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

5 hours ago