ಆಂದೋಲನ ಪುರವಣಿ

ಸಿನಿಮಾಲ್‌ : ಸಾಯಿಪ್ರಕಾಶ್ 100 : ‘ಶ್ರೀ ಸತ್ಯಸಾಯಿ ಅವತಾರ’

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago