ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…