ಆಂದೋಲನ ಪುರವಣಿ

ಸಿನಿಮಾಲ್‌ : ಸಾಯಿಪ್ರಕಾಶ್ 100 : ‘ಶ್ರೀ ಸತ್ಯಸಾಯಿ ಅವತಾರ’

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

48 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

51 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago