ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…