ಆಂದೋಲನ ಪುರವಣಿ

ಸಿನಿಮಾಲ್‌ : ಸಾಯಿಪ್ರಕಾಶ್ 100 : ‘ಶ್ರೀ ಸತ್ಯಸಾಯಿ ಅವತಾರ’

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. ಮೊನ್ನೆ ಅವರ ಹೊಸ ಕನ್ನಡ ಚಿತ್ರದ ಶೀರ್ಷಿಕೇ ಅನಾವರಣ ಕಾರ್ಯಕ್ರಮ. ಅದರ ಆಹ್ವಾನಪತ್ರಿಕೆಯಲ್ಲಿ ಮಠಾಧಿಪತಿಗಳು, ಸಚಿವರು, ಗಣ್ಯರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಮಂದಿಯ ಹೆಸರುಗಳಿದ್ದವು. ಬಂದವರು ಬೆರಳೆಣಿಕೆಯ ಮಂದಿ. ಅವರಲ್ಲಿ ಸಮಯಕ್ಕೆ ಸರಿಯಾಗಿ ಬಂದವರು ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ. ‘ನಾನು ಹತ್ತಾರು ಬಾರಿ ಪುಟ್ಟಪರ್ತಿಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪುಟ್ಟಪರ್ತಿಯ ಸಾಯಿಬಾಬಾ ಮಹಿಮೆಗಳನ್ನು ‘ಶ್ರೀ ಸತ್ಯಸಾಯಿ ಅವತಾರ’ ಮೂಲಕ ಹೇಳಬಯಸಿದ್ದಾರೆ ಸಾಯಿಪ್ರಕಾಶ್. ಮಹರ್ಷಿ ಆನಂದ ಗುರೂಜಿ, ಸಾಯಿಗೋಲ್ಡ್ ಸರವಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಭಾ.ಮ.ಹರೀಶ್, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಆತಿಥಿಗಳಾಗಿ ಪಾಲ್ಗೊಂಡಿದ್ದರು. ಗಾಂಧೀಜಿಯವರು ಹೇಳಿದ, ಸಾಯಿಬಾಬ ಅವರೂ ಹೇಳಿದ್ದಾರೆ ಎನ್ನಲಾದ ‘ನನ್ನ ಜೀವನವೇ ನನ್ನ ಸಂದೇಶ’ ಸಾಲನ್ನು ಸಾಯಿಬಾಬ ಚಿತ್ರದ ಹೆಸರಿಗೆ ಸೇರಿಸಿಕೊಂಡಿದ್ದಾರೆ ಸಾಯಿಪ್ರಕಾಶ್!

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago