ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌ : 18 ವರ್ಷಕ್ಕೂ ಮೊದಲೇ ಮತದಾನ ಮಾಡಿದ ವಿದ್ಯಾರ್ಥಿಗಳು!

-ಸಿ.ಎಂ. ಸುಗಂಧರಾಜು

ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ.

ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಮತದಾನದ ಮಹತ್ವವನ್ನು ಪ್ರಾೋಂಗಿಕವಾಗಿ ತಿಳಿಸಲು ಶಿಕ್ಷಣ ಇಲಾಖೆ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ಆೋಂಜನೆ ಮಾಡಿದೆ. ಅದರಂತೆ ಶಾಲೆಯಲ್ಲಿ ಚುನಾವಣೆ ನಡೆದು, ಮಕ್ಕಳಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಎಲ್ಲವೂ ವಾಸ್ತವಕ್ಕೆ ಹತ್ತಿರ

೨೦೨೨- ೨೩ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ಎಂಪಿ, ಎಂಎಲ್‌ಎ ಚುನಾವಣಾ ಮಾದರಿಯಲ್ಲಿ ನಡೆಸಲಾಗಿದ್ದು, ಮಕ್ಕಳಿಗೆ ಶಾಲೆಯ ವತಿಯಿಂದ ಗುರುತಿನ ಚೀಟಿಯನ್ನು ನೀಡಲಾಗಿತ್ತು. ಮೊಬೈಲ್ ಇವಿಎಂ ಮೂಲಕವೇ ಮತದಾನದ ಪ್ರಕ್ರಿೆುಂ ನಡೆಯಿತು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ, ಪ್ರಾಂಶುಪಾಲರಾದ ಮಮತಾ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಸಲ್ಲಿಕೆಯಾದ ೪೭ ನಾಮಪತ್ರಿಕೆಯಲ್ಲಿ ೧೧ ನಾಮಪತ್ರಗಳು ತಿರಸ್ಕೃತಗೊಂಡವು. ೩೬ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ಮತದಾನ ಮಾಡಿದ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಶಾಲೆಯಲ್ಲಿದ್ದ ಒಟ್ಟು ೧೩೫ ಮಕ್ಕಳಲ್ಲಿ ೧೨೧ ಮಕ್ಕಳು ಮತದಾನ ಮಾಡುವ ಮೂಲಕ ಶೇ.೯೦ ರಷ್ಟು ಮತದಾನವಾಯಿತು. ಒಟ್ಟಾರೆ ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು ೩೭ ಅಭ್ಯರ್ಥಿಗಳ ಪೈಕಿ ೨೦ ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆ್ಂಕೆುಯಾದರು.

ಕ್ಯಾಬಿನೆಟ್ ರಚನೆ

 

 

 

 

ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ೧೦ನೇ ತರಗತಿಯ ವಿದ್ಯಾರ್ಥಿ ನಿತಿನ್ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಪೂಜಾ ಆ್ಂಕೆುಯಾದರು. ಬಳಿಕ ಸಚಿವ ಸಂಪುಟ ರಚನೆ ಮಾಡಿ ವಿದ್ಯಾರ್ಥಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ನಮ್ಮ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾೋಂಗಿಕವಾಗಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಎಂಪಿ, ಎಂಎಲ್‌ಎ ಚುನಾವಣೆಯ ಮಾದರಿಯಲ್ಲಿ ಚುನಾವಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಲಾಗುತ್ತಿದೆ.
– ಮಮತಾ, ಪ್ರಾಂಶುಪಾಲರು, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ, ವಿರಾಜಪೇಟೆ. 

andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago