ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌ : 18 ವರ್ಷಕ್ಕೂ ಮೊದಲೇ ಮತದಾನ ಮಾಡಿದ ವಿದ್ಯಾರ್ಥಿಗಳು!

-ಸಿ.ಎಂ. ಸುಗಂಧರಾಜು

ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ.

ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಮತದಾನದ ಮಹತ್ವವನ್ನು ಪ್ರಾೋಂಗಿಕವಾಗಿ ತಿಳಿಸಲು ಶಿಕ್ಷಣ ಇಲಾಖೆ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ಆೋಂಜನೆ ಮಾಡಿದೆ. ಅದರಂತೆ ಶಾಲೆಯಲ್ಲಿ ಚುನಾವಣೆ ನಡೆದು, ಮಕ್ಕಳಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಎಲ್ಲವೂ ವಾಸ್ತವಕ್ಕೆ ಹತ್ತಿರ

೨೦೨೨- ೨೩ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ಎಂಪಿ, ಎಂಎಲ್‌ಎ ಚುನಾವಣಾ ಮಾದರಿಯಲ್ಲಿ ನಡೆಸಲಾಗಿದ್ದು, ಮಕ್ಕಳಿಗೆ ಶಾಲೆಯ ವತಿಯಿಂದ ಗುರುತಿನ ಚೀಟಿಯನ್ನು ನೀಡಲಾಗಿತ್ತು. ಮೊಬೈಲ್ ಇವಿಎಂ ಮೂಲಕವೇ ಮತದಾನದ ಪ್ರಕ್ರಿೆುಂ ನಡೆಯಿತು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ, ಪ್ರಾಂಶುಪಾಲರಾದ ಮಮತಾ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಸಲ್ಲಿಕೆಯಾದ ೪೭ ನಾಮಪತ್ರಿಕೆಯಲ್ಲಿ ೧೧ ನಾಮಪತ್ರಗಳು ತಿರಸ್ಕೃತಗೊಂಡವು. ೩೬ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ಮತದಾನ ಮಾಡಿದ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಶಾಲೆಯಲ್ಲಿದ್ದ ಒಟ್ಟು ೧೩೫ ಮಕ್ಕಳಲ್ಲಿ ೧೨೧ ಮಕ್ಕಳು ಮತದಾನ ಮಾಡುವ ಮೂಲಕ ಶೇ.೯೦ ರಷ್ಟು ಮತದಾನವಾಯಿತು. ಒಟ್ಟಾರೆ ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು ೩೭ ಅಭ್ಯರ್ಥಿಗಳ ಪೈಕಿ ೨೦ ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆ್ಂಕೆುಯಾದರು.

ಕ್ಯಾಬಿನೆಟ್ ರಚನೆ

 

 

 

 

ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ೧೦ನೇ ತರಗತಿಯ ವಿದ್ಯಾರ್ಥಿ ನಿತಿನ್ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಪೂಜಾ ಆ್ಂಕೆುಯಾದರು. ಬಳಿಕ ಸಚಿವ ಸಂಪುಟ ರಚನೆ ಮಾಡಿ ವಿದ್ಯಾರ್ಥಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ನಮ್ಮ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾೋಂಗಿಕವಾಗಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಎಂಪಿ, ಎಂಎಲ್‌ಎ ಚುನಾವಣೆಯ ಮಾದರಿಯಲ್ಲಿ ಚುನಾವಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಲಾಗುತ್ತಿದೆ.
– ಮಮತಾ, ಪ್ರಾಂಶುಪಾಲರು, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ, ವಿರಾಜಪೇಟೆ. 

andolana

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

7 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

7 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

8 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago