-ಸಿ.ಎಂ. ಸುಗಂಧರಾಜು
ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ.
ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಮತದಾನದ ಮಹತ್ವವನ್ನು ಪ್ರಾೋಂಗಿಕವಾಗಿ ತಿಳಿಸಲು ಶಿಕ್ಷಣ ಇಲಾಖೆ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ಆೋಂಜನೆ ಮಾಡಿದೆ. ಅದರಂತೆ ಶಾಲೆಯಲ್ಲಿ ಚುನಾವಣೆ ನಡೆದು, ಮಕ್ಕಳಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಎಲ್ಲವೂ ವಾಸ್ತವಕ್ಕೆ ಹತ್ತಿರ
೨೦೨೨- ೨೩ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ಎಂಪಿ, ಎಂಎಲ್ಎ ಚುನಾವಣಾ ಮಾದರಿಯಲ್ಲಿ ನಡೆಸಲಾಗಿದ್ದು, ಮಕ್ಕಳಿಗೆ ಶಾಲೆಯ ವತಿಯಿಂದ ಗುರುತಿನ ಚೀಟಿಯನ್ನು ನೀಡಲಾಗಿತ್ತು. ಮೊಬೈಲ್ ಇವಿಎಂ ಮೂಲಕವೇ ಮತದಾನದ ಪ್ರಕ್ರಿೆುಂ ನಡೆಯಿತು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ, ಪ್ರಾಂಶುಪಾಲರಾದ ಮಮತಾ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಸಲ್ಲಿಕೆಯಾದ ೪೭ ನಾಮಪತ್ರಿಕೆಯಲ್ಲಿ ೧೧ ನಾಮಪತ್ರಗಳು ತಿರಸ್ಕೃತಗೊಂಡವು. ೩೬ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ಮತದಾನ ಮಾಡಿದ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಶಾಲೆಯಲ್ಲಿದ್ದ ಒಟ್ಟು ೧೩೫ ಮಕ್ಕಳಲ್ಲಿ ೧೨೧ ಮಕ್ಕಳು ಮತದಾನ ಮಾಡುವ ಮೂಲಕ ಶೇ.೯೦ ರಷ್ಟು ಮತದಾನವಾಯಿತು. ಒಟ್ಟಾರೆ ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು ೩೭ ಅಭ್ಯರ್ಥಿಗಳ ಪೈಕಿ ೨೦ ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆ್ಂಕೆುಯಾದರು.
ಕ್ಯಾಬಿನೆಟ್ ರಚನೆ
ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ೧೦ನೇ ತರಗತಿಯ ವಿದ್ಯಾರ್ಥಿ ನಿತಿನ್ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಪೂಜಾ ಆ್ಂಕೆುಯಾದರು. ಬಳಿಕ ಸಚಿವ ಸಂಪುಟ ರಚನೆ ಮಾಡಿ ವಿದ್ಯಾರ್ಥಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ನಮ್ಮ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾೋಂಗಿಕವಾಗಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಎಂಪಿ, ಎಂಎಲ್ಎ ಚುನಾವಣೆಯ ಮಾದರಿಯಲ್ಲಿ ಚುನಾವಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಲಾಗುತ್ತಿದೆ.
– ಮಮತಾ, ಪ್ರಾಂಶುಪಾಲರು, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ, ವಿರಾಜಪೇಟೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…