-ಸಿ.ಎಂ. ಸುಗಂಧರಾಜು
ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ.
ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಮತದಾನದ ಮಹತ್ವವನ್ನು ಪ್ರಾೋಂಗಿಕವಾಗಿ ತಿಳಿಸಲು ಶಿಕ್ಷಣ ಇಲಾಖೆ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ಆೋಂಜನೆ ಮಾಡಿದೆ. ಅದರಂತೆ ಶಾಲೆಯಲ್ಲಿ ಚುನಾವಣೆ ನಡೆದು, ಮಕ್ಕಳಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಎಲ್ಲವೂ ವಾಸ್ತವಕ್ಕೆ ಹತ್ತಿರ
೨೦೨೨- ೨೩ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ಎಂಪಿ, ಎಂಎಲ್ಎ ಚುನಾವಣಾ ಮಾದರಿಯಲ್ಲಿ ನಡೆಸಲಾಗಿದ್ದು, ಮಕ್ಕಳಿಗೆ ಶಾಲೆಯ ವತಿಯಿಂದ ಗುರುತಿನ ಚೀಟಿಯನ್ನು ನೀಡಲಾಗಿತ್ತು. ಮೊಬೈಲ್ ಇವಿಎಂ ಮೂಲಕವೇ ಮತದಾನದ ಪ್ರಕ್ರಿೆುಂ ನಡೆಯಿತು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ, ಪ್ರಾಂಶುಪಾಲರಾದ ಮಮತಾ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಸಲ್ಲಿಕೆಯಾದ ೪೭ ನಾಮಪತ್ರಿಕೆಯಲ್ಲಿ ೧೧ ನಾಮಪತ್ರಗಳು ತಿರಸ್ಕೃತಗೊಂಡವು. ೩೬ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ಮತದಾನ ಮಾಡಿದ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಶಾಲೆಯಲ್ಲಿದ್ದ ಒಟ್ಟು ೧೩೫ ಮಕ್ಕಳಲ್ಲಿ ೧೨೧ ಮಕ್ಕಳು ಮತದಾನ ಮಾಡುವ ಮೂಲಕ ಶೇ.೯೦ ರಷ್ಟು ಮತದಾನವಾಯಿತು. ಒಟ್ಟಾರೆ ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು ೩೭ ಅಭ್ಯರ್ಥಿಗಳ ಪೈಕಿ ೨೦ ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆ್ಂಕೆುಯಾದರು.
ಕ್ಯಾಬಿನೆಟ್ ರಚನೆ
ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ೧೦ನೇ ತರಗತಿಯ ವಿದ್ಯಾರ್ಥಿ ನಿತಿನ್ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ಪೂಜಾ ಆ್ಂಕೆುಯಾದರು. ಬಳಿಕ ಸಚಿವ ಸಂಪುಟ ರಚನೆ ಮಾಡಿ ವಿದ್ಯಾರ್ಥಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ನಮ್ಮ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾೋಂಗಿಕವಾಗಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಎಂಪಿ, ಎಂಎಲ್ಎ ಚುನಾವಣೆಯ ಮಾದರಿಯಲ್ಲಿ ಚುನಾವಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಲಾಗುತ್ತಿದೆ.
– ಮಮತಾ, ಪ್ರಾಂಶುಪಾಲರು, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ, ವಿರಾಜಪೇಟೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…