Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಗೆ’ ಮತ್ತೆ ಸಂಕಷ್ಟ : ಶೀರ್ಷಿಕೆ ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ   ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋದಲ್ಲಿ ಸಿದ್ಧವಾಗುತ್ತಿರುವ ಚಿತ್ರದ ಶೀರ್ಷಿಕೆಗೆ ನಗರದ ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಈ ಕುರಿತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ 18ನೇ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಪ್ರಸಾದ್ ಅವರು ಶೀರ್ಷಿಕೆ ಬಳಸದಂತೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ರಾಜೇಂದ್ರಸಿಂಗ್ ಬಾಬು ಅವರ ಪರ ವಕೀಲರು, ನಮ್ಮ ಅರ್ಜಿದಾರರರು ಮಂಡಳಿಯಲ್ಲಿ ಈಗಾಗಲೇ ತಾವು ನಿರ್ಮಾಣ ಮಾಡುತ್ತಿರುವ ಕನ್ನಡ ಚಲನಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಶೀರ್ಷಿಕೆ ನೋಂದಣಿ ಮಾಡಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ’ ಪೋಸ್ಟರ್​ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು.

ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು. ಈ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನದ್ದಾಗಿದೆ. ಹಾಗಾಗಿ ಶೀರ್ಷಿಕೆ ಬಳಸಲು ಬೇರೆ ಯಾರಿಗೂ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಅಲ್ಲದೇ, ಒಂದು ವೇಳೆ ಬಳಕೆ ಮಾಡಿದಲ್ಲಿ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ. ಈ ಶೀರ್ಷಿಕೆಯ ಹೆಸರನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆ ಬಳಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಆದೇಶಿಸಿದ್ದಾರೆ. ಅಲ್ಲದೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್‌ ವಿಚಾರಣೆ ಮುಂದೂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!