ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋದಲ್ಲಿ ಸಿದ್ಧವಾಗುತ್ತಿರುವ ಚಿತ್ರದ ಶೀರ್ಷಿಕೆಗೆ ನಗರದ ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಈ ಕುರಿತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ 18ನೇ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಪ್ರಸಾದ್ ಅವರು ಶೀರ್ಷಿಕೆ ಬಳಸದಂತೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ರಾಜೇಂದ್ರಸಿಂಗ್ ಬಾಬು ಅವರ ಪರ ವಕೀಲರು, ನಮ್ಮ ಅರ್ಜಿದಾರರರು ಮಂಡಳಿಯಲ್ಲಿ ಈಗಾಗಲೇ ತಾವು ನಿರ್ಮಾಣ ಮಾಡುತ್ತಿರುವ ಕನ್ನಡ ಚಲನಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಶೀರ್ಷಿಕೆ ನೋಂದಣಿ ಮಾಡಿದ್ದಾರೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಪೋಸ್ಟರ್ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು.
ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು. ಈ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನದ್ದಾಗಿದೆ. ಹಾಗಾಗಿ ಶೀರ್ಷಿಕೆ ಬಳಸಲು ಬೇರೆ ಯಾರಿಗೂ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಅಲ್ಲದೇ, ಒಂದು ವೇಳೆ ಬಳಕೆ ಮಾಡಿದಲ್ಲಿ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ. ಈ ಶೀರ್ಷಿಕೆಯ ಹೆಸರನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆ ಬಳಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಆದೇಶಿಸಿದ್ದಾರೆ. ಅಲ್ಲದೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್ ವಿಚಾರಣೆ ಮುಂದೂಡಿದೆ.
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…