ಆಂದೋಲನ ಪುರವಣಿ

ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಗೆ’ ಮತ್ತೆ ಸಂಕಷ್ಟ : ಶೀರ್ಷಿಕೆ ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ   ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋದಲ್ಲಿ ಸಿದ್ಧವಾಗುತ್ತಿರುವ ಚಿತ್ರದ ಶೀರ್ಷಿಕೆಗೆ ನಗರದ ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಈ ಕುರಿತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ 18ನೇ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಪ್ರಸಾದ್ ಅವರು ಶೀರ್ಷಿಕೆ ಬಳಸದಂತೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ರಾಜೇಂದ್ರಸಿಂಗ್ ಬಾಬು ಅವರ ಪರ ವಕೀಲರು, ನಮ್ಮ ಅರ್ಜಿದಾರರರು ಮಂಡಳಿಯಲ್ಲಿ ಈಗಾಗಲೇ ತಾವು ನಿರ್ಮಾಣ ಮಾಡುತ್ತಿರುವ ಕನ್ನಡ ಚಲನಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಶೀರ್ಷಿಕೆ ನೋಂದಣಿ ಮಾಡಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ’ ಪೋಸ್ಟರ್​ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು.

ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು. ಈ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನದ್ದಾಗಿದೆ. ಹಾಗಾಗಿ ಶೀರ್ಷಿಕೆ ಬಳಸಲು ಬೇರೆ ಯಾರಿಗೂ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಅಲ್ಲದೇ, ಒಂದು ವೇಳೆ ಬಳಕೆ ಮಾಡಿದಲ್ಲಿ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ. ಈ ಶೀರ್ಷಿಕೆಯ ಹೆಸರನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆ ಬಳಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಆದೇಶಿಸಿದ್ದಾರೆ. ಅಲ್ಲದೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್‌ ವಿಚಾರಣೆ ಮುಂದೂಡಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago