ಆಂದೋಲನ ಪುರವಣಿ

ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಗೆ’ ಮತ್ತೆ ಸಂಕಷ್ಟ : ಶೀರ್ಷಿಕೆ ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ   ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋದಲ್ಲಿ ಸಿದ್ಧವಾಗುತ್ತಿರುವ ಚಿತ್ರದ ಶೀರ್ಷಿಕೆಗೆ ನಗರದ ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಈ ಕುರಿತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ 18ನೇ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಪ್ರಸಾದ್ ಅವರು ಶೀರ್ಷಿಕೆ ಬಳಸದಂತೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ರಾಜೇಂದ್ರಸಿಂಗ್ ಬಾಬು ಅವರ ಪರ ವಕೀಲರು, ನಮ್ಮ ಅರ್ಜಿದಾರರರು ಮಂಡಳಿಯಲ್ಲಿ ಈಗಾಗಲೇ ತಾವು ನಿರ್ಮಾಣ ಮಾಡುತ್ತಿರುವ ಕನ್ನಡ ಚಲನಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಶೀರ್ಷಿಕೆ ನೋಂದಣಿ ಮಾಡಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ’ ಪೋಸ್ಟರ್​ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು.

ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು. ಈ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನದ್ದಾಗಿದೆ. ಹಾಗಾಗಿ ಶೀರ್ಷಿಕೆ ಬಳಸಲು ಬೇರೆ ಯಾರಿಗೂ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಅಲ್ಲದೇ, ಒಂದು ವೇಳೆ ಬಳಕೆ ಮಾಡಿದಲ್ಲಿ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ. ಈ ಶೀರ್ಷಿಕೆಯ ಹೆಸರನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆ ಬಳಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಆದೇಶಿಸಿದ್ದಾರೆ. ಅಲ್ಲದೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್‌ ವಿಚಾರಣೆ ಮುಂದೂಡಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago