ಆಂದೋಲನ ಪುರವಣಿ

ಬರಹ:ಬದುಕು : ಅಮ್ಮನ ಮೈಮೇಲೆ ಬರುತ್ತಿದ್ದ ದೈವ ತಂಗಿಯನ್ನು ಕಾಪಾಡಲಿಲ್ಲ

ತುಳುನಾಡಿನ ‘ಪಂಜುರ್ಲಿ’ ಬೂತ ‘ಕಾಂತಾರ’ ಸಿನೆನಮಾದಲ್ಲಿ ಮಿಂಚುತ್ತಿರುವ ಹೊತ್ತಲ್ಲಿ ಲೇಖಕರು ತಮ್ಮ ತಾಯಿಯ ಮೈಮೇಲೆ ಬರುತ್ತಿದ್ದ ‘ಸಿರಿ’ ದೈವದ ಕುರಿತು ಬರೆದಿದ್ದಾರೆ  

ಸಂತೋಷ ಗುಡ್ಡಿಯಂಗಡಿ sguddiyangadi@gmail.com

ನಾವು ನಮ್ಮ ತಾಯಿಯನ್ನು ಅಬ್ಬಿ ಎಂದು ಕರೆಯುವುದು. ನನ್ನ ಅಬ್ಬಿ ದೈವದ ಪಾತ್ರಿ. ಮಾತಿಗೊಂದು ಆದ್ಗೇತಿ (ಗಾದೆ) ಹೇಳುವ ನನ್ನಬ್ಬಿಯ ಮೇಲೆ ದೈವ ಆಳಿ ಬಂದಾಗ ಮಾತ್ರ ಅವರ ಹಾವ ಭಾವ ಭಾಷೆ ನಿಲುವು ನಡಿಗೆ ಕುಣಿತ ಎಲ್ಲ ಬದಲಾಗಿ ಬಿಡುತ್ತದೆ. ‘ತನ್ನ ತಪ್ಪಿಲ್ಲದಿದ್ದರೆ ತೋಳಿಗೆ ಸರಗಿ (ಪೊಲೀಸ್) ಹಾಕಿದವ ಬಂದರೂ ತಾನು ಬಾಗುವುದಿಲ್ಲ’ ಎಂದು ದೃಢವಾಗಿ ಜಗಳಕ್ಕೆ ನಿಲ್ಲುವ ನನ್ನ ತಾಯಿಯ ಭುಂಂಕರ ಸೌಂಡಿಗೆ ನಾವೇನು, ಊರಿನ ಇತರೆ ಗಟ್ಟಿ ಹೆಂಗಸರೇ ಹೆದರಿ ಹಿಂದಿನಿಂದ ಮಾತಾಡಿಕೊಳ್ಳುತ್ತಿದ್ದರು. ದೈವ ಆಳಿ ಬಂದಾಗ ಅಂತಹ ಜೋರು ಸೌಂಡು ಮೃದು ಮಧುರವಾಗಿ ಬಿಡುತ್ತಿತ್ತು. ಅಲ್ಲೊಂದು ಹೊಸ ರಾಗ, ಲಯದ ಮಾಧುರ್ಯವೇರ್ಪಡುತ್ತಿತ್ತು.

ತಾನು ವೆಜಿಟೇರಿಯನ್ ದೇವರಾದ ಹಿರಿಯಡ್ಕದ ಸಿರಿ ಅಮ್ಮನ ಪಾತ್ರಿ ಎಂಬುದು ನನ್ನ ತಾಯಿಗೆ ಒಂದು ಸಣ್ಣ ಕೋಡು ಮೂಡಿಸಿತ್ತು. ಹಾಗಾಗಿ ಅವರು ಆ ಅಮ್ಮನ ದರ್ಶನಕ್ಕೆ ಬೇಕಾದ ಮಡಿಯ ಪಟ್ಟೆ, ಕಾಲಿನ ಕಡಗ ಮುಂತಾದ ಸಾಮಗ್ರಿಗಳನ್ನು ಅತ್ಯಂತ ಸ್ವಚ್ಛವಾಗಿ ಮುಟ್ಟು ಚಟ್ಟು ಆಗದ ಹಾಗೆ ಕಾಪಾಡಿಕೊಂಡಿದ್ದರು.

ನಮ್ಮ ಮನೆಯಲ್ಲೇ ಆಗಲಿ, ಇನ್ಯಾರದೋ ಮನೆಯಲ್ಲಿ ಆಗಲಿ ಅಮ್ಮನವರ ದರ್ಶನಕ್ಕೆ ಹೇಳಿಕೆ ಬಂದಾಗ ನನ್ನ ತಾಯಿ ಗೌಲು ತಿನ್ನುತ್ತಿರಲಿಲ್ಲ. ಎಳನೀರು ಕುಡಿಯುತ್ತಿದ್ದರು. ದರ್ಶನಕ್ಕೆ ಬೇಕಾದ ಸಾಮಗ್ರಿಗಳನ್ನು ಮನೆಗೆ ತಂದು ಅದರ ಜಾಗದಲ್ಲಿ ತಲುಪಿಸುವವರೆಗೆ ಅವರು ಗೌಲು ಮುಟ್ಟುತ್ತಿರಲಿಲ್ಲ. ಆ ವೆಜಿಟೇರಿಯನ್ ಅಮ್ಮನ ಬಿಟ್ಟು ನನ್ನಬ್ಬಿಯ ನೋಡಿದರೆ ಅವರು ನಾನ್ವೆಜ್ ಅಡುಗೆ ಮಾಡುವುದರಲ್ಲಿ ಸಿದ್ಧಹಸ್ತರು. ಅದರಲ್ಲೂ ಅವರೇ ಹಿಡಿದುಕೊಂಡು ಬರುತ್ತಿದ್ದ ಹೊಳೆಮೀನುಗಳ ಅಡುಗೆಯಂತೂ ಅದ್ಭುತ.

ಹೀಗೆ ನಮ್ಮ ತಾಯಿಯಾಗಿ ಮಕ್ಕಳಿಗೆ ಅತ್ಯಂತ ರುಚಿಕರ ಮೀನಿನ ಅಡುಗೆ ಮಾಡಿ ಬಡಿಸುತ್ತಾ ತಾನೂ ತಿನ್ನುತ್ತಾ, ದೈವದ ವಿಚಾರಕ್ಕೆ ಬಂದಾಗ ಮೀನು ಮಾಂಸದ ವಾಸನೆ ಸೋಕದ ಹಾಗೆ ಸಿರಿ ಅಮ್ಮನಿಗೆ ನಿಷ್ಠೆಯಾಗಿರುತ್ತಿದ್ದರು. ಆದರೆ ನನ್ನ ತಾಯಿ ಸಿರಿ ಅಮ್ಮನಿಗಾಗಿ ಇಷ್ಟು ನಿಷ್ಠೆ, ಮಡಿಯಾಗಿದ್ದರೂ ನಮ್ಮ ಜಾತಿಯಿಂದಾಗಿ ಅಮ್ಮನ ಮೇಲೆ ಆಳಿ ಬರುವ ದೈವಕ್ಕೆ ಜಾತಿ ಮೀರಿ ಅನ್ಯ ಜಾತಿಯವರಿಗೆ ಬಡ್ಕೊಂಡ ಭೂತ ಪಿಶಾಚಿಗಳಿಗೆ ಕಟ್ಟುಪಾಡು ಮಾಡುವ, ನುಡಿ ಕೊಡುವ ತಾಕತ್ತು ಇರಲಿಲ್ಲ. ಎಷ್ಟೇ ಘಟಾನುಘಟಿ ಪಾತ್ರಿಯಾಗಿದ್ದರೂ ನನ್ನ ತಾಯಿಯ ಮೇಲೆ ಆಳಿ ಬರುವ ಸಿರಿ ಅಮ್ಮ ನಮ್ಮ ಜಾತಿಗಷ್ಟೇ ಸೀಮಿತವಾಗಿತ್ತು.

ಯಾಕೆ ಹೀಗೆ? ಎಂದರೆ ನಮ್ಮೂರ ಕಡೆ ಪ್ರತಿ ಜಾತಿಯಲ್ಲಿಯೂ ಈ ಅಮ್ಮನವರ ಪಾತ್ರಿಗಳಿರುತ್ತಾರೆ. ಈ ಎಲ್ಲಾ ಪಾತ್ರಿಗಳೂ ತಮ್ಮ ತಮ್ಮ ಜಾತಿಗಳಲ್ಲಿ ಬಗೆಹರಿಸಿದ, ಬಗೆಹರಿಸಲು ಬಾಕಿಯಿಟ್ಟ ಭೂತ ಪಿಶಾಚಿಗಳ ಡೇಟಾ ಸಂಗ್ರಹ ಮಾಡುವುದು ಮೂಲ ಅಮ್ಮನವರಿಗೆ ಕಷ್ಟವಾಗುತಿತ್ತೋ ಅಥವಾ ಶ್ರೇಣಿಕೃತ ಜಾತಿಗಳ ದಬ್ಬಾಳಿಕೆ ಕಂಡು ಬೇಜಾರು ಆಗಿರುವ ಮೂಲ ಅಮ್ಮನವರು ತಾನು ಆಯಾ ಜಾತಿಯಲ್ಲೇ ಪರಿಹಾರ ಸೂಚಿಸುವುದಕ್ಕೆ ಕಂಡುಕೊಂಡ ವಿಕೇಂದ್ರಿಕೃತ ಸುಲಭೋಪಾಯವೋ ಏನೋ? ಒಟ್ಟಾರೆ ನನ್ನ ತಾಯಿಯ ಭಾರೀ ನೇಮದ ಅಮ್ಮನವರ ಶಕ್ತಿ ನಮ್ಮ ಜಾತಿಗಷ್ಟೇ ಸೀಮಿತವಾಗಿತ್ತು.

ಆದರೂ ಇಂತಹ ನೇಮದ ಅಮ್ಮನವರ ಶಕ್ತಿಗೆ ಭಯಂಕರ ಸೋಲಾಗಿದ್ದು ಮಾತ್ರ ನಮ್ಮ ಮನೆಯಲ್ಲಿ. ನನ್ನ ಪುಟ್ಟ ತಂಗಿಗೆ ಕಾಣಿಸಿಕೊಂಡ ವಾಂತಿ ಬೇಧಿ, ಚಳಿ ಜ್ವರ ದಿನೇ ದಿನೇ ಹದಗೆಡುತ್ತಾ, ಅದಕ್ಕಾಗಿ ಅಬ್ಬಿಯ ಮೇಲಾಳಿ ಬರುವ ಅಮ್ಮನವರ ಮಾಧುರ್ಯ ಆರ್ಭಟಕ್ಕೆ ತಿರುಗಿದರೂ ನನ್ನ ತಂಗಿಗೆ ವಾಸಿಯಾಗಲಿಲ್ಲ. ಅಮ್ಮನವರ ಸಪೋರ್ಟಿಗೆ ಹಯ್ಗುಳಿಯ ಆರ್ಭಟ ಕೂಡಿಕೊಂಡರೂ ಒಂದು ದಿನ ನನ್ನ ತಂಗಿ ಆಸ್ಪತ್ರೆಗೆ ಹೋಗುವ ಮೊದಲೇ ತೀರಿಕೊಂಡಳು. ನಾವು ನಾಲ್ಕು ಜನ ಮಕ್ಕಳು ಮೂವರಾದೆವು.

1980-90ರ ದಶಕದಲ್ಲಿ ಪಾತ್ರಿಯಾಗಿ ಮಡಿಯಾಗಿದ್ದ ನನ್ನ ತಾಯಿ ಬರಬರುತ್ತಾ ಮಂಕಾದರು. ಮತ್ತು ದರ್ಶನಕ್ಕೆ ಕರೆ ಬಂದರೆ ತಾನು ಬರುವುದಿಲ್ಲ ಮತ್ತು ಆಸ್ಪತ್ರೆಗೆ ಹೋಗಿ ಎನ್ನುತ್ತಿದ್ದರು. ಅಬ್ಬಿ ತೀರಿಕೊಂಡ ನಂತರವೂ ಅವರ ಅಮ್ಮನವರ ಪಟ್ಟೆ ಸಾಮಾನುಗಳು ಒಂದಷ್ಟು ದಿನ ಇದ್ದವು.

 

andolana

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

1 hour ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago