ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌: ಕ್ರೀಡಾಪಟುಗಳನ್ನು ‘ಕಾಡುವ’ ಗಾಯವೆಂಬೋ ಪೆಡಂಭೂತ

ರಾಷ್ಟ್ರೀಯ ಕ್ರೀಡಾ ದಿನ ಇಂದು

‘ಟೆಂಪಲ್‌ರನ್’ ಮೊಬೈಲ್‌ನಲ್ಲಿ ಆಡುವ ಗೇಮ್ ಆ್ಯಪ್. ಅಬಾಲವೃದ್ಧರ ತನಕವೂ ಇದರ ‘ಹುಚ್ಚು’ ಇದೆ. ಈ ಗೇಮ್‌ನಲ್ಲಿ ಮುಂದೆ ಒಬ್ಬ ಓಡುತ್ತಿರುತ್ತಾನೆ. ಅವನನ್ನು ಹಿಡಿಯಲು ಹಿಂದೊಬ್ಬ ಧಾವಿಸಿ ಬರುತ್ತಾನೆ. ಮುಂದಿನ ಓಟಗಾರನಿಗೆ ಅಲ್ಲಲ್ಲಿ ಅಡ ತಡೆಗಳಿರುತ್ತವೆ ಹಾಗೇಯೇ ಮಧ್ಯೆ-ಮಧ್ಯೆ ‘ಗಿಫ್ಟ್’ಗಳು ಕೂಡಾ ದೊರಕುತ್ತವೆ. ಇವೆಲ್ಲ ಸಿಕ್ಕರೂ ಆತ ಸಮಾಧಾನ ಪಟ್ಟುಕೊಳ್ಳುವಂತಿಲ್ಲ. ಹಿಂದಿನವ ಆತನ ಬೆನ್ನತ್ತಿ ಬರುವುದನ್ನೂ ಬಿಡುವುದೇ ಇಲ್ಲ..

ಈ ಗೇಮ್ ಅನ್ನೇ ನಮ್ಮ ಕ್ರೀಡಾಪಟುಗಳಿಗೆ ರೂಪಕವಾಗಿ ತಗೆದುಕೊಳ್ಳಬಹುದು. ಮುಂದೆ ಓಡುತ್ತಿರುವವ ಆಟಗಾರನಾದರೇ ಹಿಂದೆ ಬೆನ್ನತ್ತಿರುವವ ‘ಗಾಯ’ಎಂಬೋ ಬ್ರಹ್ಮ ರಾಕ್ಷಸ ಎಂದುಕೊಳ್ಳಬಹುದು. ಎಷ್ಟೇ ಹುಷಾರಾಗಿದ್ದರೂ ಕೂಡ ಈ ಬ್ರಹ್ಮರಾಕ್ಷಸ ಎತ್ತಲಿಂದಾದರೂ ಧುತ್ತೆಂದು ಬಂದು ಕಣ್ಣ ಮುಂದೆ ಕ್ಷಣಾರ್ಧದಲ್ಲಿ ಕಾಣಿಸಿಕೊಳ್ಳುತ್ತಾನೆ. ಕಾಣಿಸಿಕೊಂಡವನೂ ಸುಮ್ಮನೆ ಹೋಗುವುದಿಲ್ಲ. ಆಟಗಾರರ ಭವಿಷ್ಯವನ್ನೇ ನಾಶ ಮಾಡುತ್ತಾನೆ.

ಭಾರತದಲ್ಲಿ ಅನೇಕ ಕ್ರೀಡಾಪಟುಗಳನ್ನು ‘ಗಾಯ’ ಇನ್ನಿಲ್ಲದಂತೆ ಕಾಡಿದೆ. ಕೆಲವರು ಇದರ ವಿರುದ್ಧ ಹೋರಾಡಿ ಮತ್ತೆ ಅಂಗಳಕ್ಕೆ ಬಂದರೂ ಮೊದಲಿನ ಪ್ರದರ್ಶನ ನೀಡಲು ಆಗದೇ ಒದ್ದಾಡಿದ್ದಾರೆ. ಇನ್ನೂ ಕೆಲವರಂತೂ ಇದರಿಂದ ರೋಸಿ ಹೋಗಿ ನಿವೃತ್ತಿಯಾದ ಉದಾಹರಣೆಗಳಿವೆ.

ಒಲಂಪಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಗೆರೆ ದಾಟಿದ ಹುಡುಗ ನೀರಜ್ ಚೋಪ್ರಾ ಗಾಯಗೊಂಡ ಕಾರಣ ಕಾಮನ್‌ವೆಲ್ತ್ ಗೇಮ್ ತಪ್ಪಿಸಿಕೊಂಡರು. ಚಿನ್ನದ ಭರವಸೆ ಇಟ್ಟಿದ್ದ ಲಕ್ಷಾಂತರ ಭಾರತೀಯರು ಮಮ್ಮುಲ ಮರುಗಿದರು. ಕ್ರಿಕೆಟ್ ದೇವರು ಸಚಿನ್ ಅವರನ್ನು ಬೆನ್ನುಹುರಿ ಸಮಸ್ಯೆ ‘ಬೇತಾಳ’ನಂತೆ ನೇತು ಹಾಕಿಕೊಂಡಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದು ಮತ್ತೆ ‘ಪಿಚ್’ಗೆ ಬಂದರೂ ಮೊದಲು ಹೊಡೆಯುತ್ತಿದ್ದ ‘ಶಾಟ್ಸ್’ಗಳು ಬತ್ತಳಿಕೆಯಿಂದ ಕಾಣೆಯಾಗಿದ್ದವು. ಬ್ಯಾಟಿನ ಭಾರವೂ ಕಡಿಮೆಯಾಗಿತ್ತು. ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ ವಿಜಯ ಭಾರದ್ವಾಜ್ ಆಡಿದ ಮೊದಲ ಅಂತಾರಾಷ್ಟ್ರೀಯ ಸರಣಿಯಲ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದುಕೊಂಡರು. ಗಾಯಾಳುವಾದರು ಮತ್ತೆ ಇಂಡಿಯಾ ಟೀಮ್ ಪ್ರತಿನಿಧಿಸಲೇ ಇಲ್ಲ.

ಚಿಕಿತ್ಸೆಯೊಂದಿಗೆ ಮನಸ್ಥೈರ್ಯ ತುಂಬಬೇಕು
ಕ್ರೀಡಾಪಟುಗಳು ಗಾಯಗೊಂಡ ಸಮಯದಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯವೋ ಅವರಿಗೆ ಮನಸ್ಥೈರ್ಯ ತುಂಬುದು ಅಷ್ಟೇ ಮುಖ್ಯ ಎನ್ನುತ್ತಾರೆ ಡಾ.ವಿಜಯ ಸ್ಯಾಮುವೆಲ್.

ಜೆಎಸ್‌ಎಸ್ ಫಿಜಿಯೋಥೆರಪಿ ಕಾಲೇಜಿನ ಕ್ರೀಡಾ ವಿಜ್ಞಾನದ ಮುಖ್ಯಸ್ಥರಾಗಿರುವ ಡಾ.ವಿಜಯ್ ಅವರು ಇಲ್ಲಿವರೆಗೆ ನೂರಾರು ಕ್ರೀಡಾಪಟುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಅವರಿಗೆ ಕೌನ್ಸಿಲಿಂಗ್ ಕೂಡಾ ಮಾಡಿದ್ದಾರೆ. ಅವರ ಅನುಭವದ ಪ್ರಕಾರ, ಗಾಯಗೊಂಡ ಸಮಯದಲ್ಲಿ ಮಾನಸಿಕ ಗೊಂದಲದಿಂದಾಗಿ ಕ್ರೀಡಾಪಟುಗಳು ಕುಗ್ಗಿ ಹೋಗಿರುತ್ತಾರೆ. ಭವಿಷ್ಯವೇನು ಎನ್ನುವ ಚಿಂತೆಯೂ ಮನಸ್ಸಿನಲ್ಲಿ ಓಡಾಡುತ್ತಿರುತ್ತದೆ. ಅಂತಹ ಸಮಯದಲ್ಲಿ ಅವರಿಗೆ ಸೂಕ್ತ ಆಪ್ತ ಸಮಾಲೋಚನೆ ನಡೆಸಿ, ಧೈರ್ಯ ತುಂಬಿದರೆ ಅವರು ಗಾಯವನ್ನು ಮರೆತು ಮೊದಲಿನ ಮಟ್ಟದಲ್ಲೇ ಪ್ರದರ್ಶನ ನೀಡುತ್ತಾರೆ ಎನ್ನುವುದಾಗಿದೆ.

ತಂತ್ರಜ್ಞಾನ ಬೆಳವಣಿಗೆಯಾಗಿರುವುದರಿಂದ ಗಾಯಗೊಂಡ ಕ್ರೀಡಾಪಟುಗಳನ್ನು ಪುನಶ್ಚೇತನಗೊಳಿಸುವ ಕ್ರಮವು ಮೊದಲಿಗಿಂತ ಹೆಚ್ಚು ಉತ್ತಮಗೊಂಡಿದೆ.ಮಾಂಸಖಂಡ, ಮೀನಖಂಡಗಳ ಸಾಮರ್ಥ್ಯವನ್ನು ನಿಖರವಾಗಿ ಅಳೆಯುವ ಉಪಕರಣಗಳು ಲಭ್ಯವಿರುವುದರಿಂದ ಕ್ರೀಡಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆತು ಮೊದಲಿನಂತೆ ಅವರು ಮೈದಾನಕ್ಕೆ ಧುಮುಕಬಹುದು ಎಂದರು.

ಇತ್ತೀಚೆಗೆ ನಡೆದ ಘಟನೆಯೊಂದನ್ನು ನೆನಪು ಮಾಡಿಕೊಂಡ ಸ್ಯಾಮುವೆಲ್ ಅವರು, ವಾಲಿಬಾಲ್ ಆಟಗಾರನೊಬ್ಬ ಗಾಯಗೊಂಡು ಆಸ್ಪತ್ರೆಗೆ ಬಂದ ಸಮಯದಲ್ಲಿ ತುಂಬ ಗಾಬರಿಯಾಗಿದ್ದರು. ಅವರಿಗೆ ಧೈರ್ಯ ತುಂಬಿ, ನೀವು ಮೊದಲಿನಂತೆ ಉತ್ತಮವಾಗಿ ಆಟವಾಡುತ್ತೀರಿ ಎಂದು ಭರವಸೆ ನೀಡಿ, ಚಿಕಿತ್ಸೆ ಮಾಡಲಾಯಿತು. ಅತಿ ಬೇಗನೆ ಚೇತರಿಸಿಕೊಂಡ ಅವರು, ಮತ್ತೆ ಮೈದಾನಕ್ಕೆ ಇಳಿದು ಉತ್ತಮವಾಗಿ ಆಟವಾಡಿ ತಮ್ಮ ತಂಡಕ್ಕೆ ಕಪ್ ಗೆದ್ದುಕೊಟ್ಟರು ಎಂದು ತಿಳಿಸಿದರು.

andolana

Recent Posts

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

2 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

19 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

45 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

1 hour ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

2 hours ago