ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌: ಕ್ರೀಡಾಪಟುಗಳನ್ನು ‘ಕಾಡುವ’ ಗಾಯವೆಂಬೋ ಪೆಡಂಭೂತ

ರಾಷ್ಟ್ರೀಯ ಕ್ರೀಡಾ ದಿನ ಇಂದು

‘ಟೆಂಪಲ್‌ರನ್’ ಮೊಬೈಲ್‌ನಲ್ಲಿ ಆಡುವ ಗೇಮ್ ಆ್ಯಪ್. ಅಬಾಲವೃದ್ಧರ ತನಕವೂ ಇದರ ‘ಹುಚ್ಚು’ ಇದೆ. ಈ ಗೇಮ್‌ನಲ್ಲಿ ಮುಂದೆ ಒಬ್ಬ ಓಡುತ್ತಿರುತ್ತಾನೆ. ಅವನನ್ನು ಹಿಡಿಯಲು ಹಿಂದೊಬ್ಬ ಧಾವಿಸಿ ಬರುತ್ತಾನೆ. ಮುಂದಿನ ಓಟಗಾರನಿಗೆ ಅಲ್ಲಲ್ಲಿ ಅಡ ತಡೆಗಳಿರುತ್ತವೆ ಹಾಗೇಯೇ ಮಧ್ಯೆ-ಮಧ್ಯೆ ‘ಗಿಫ್ಟ್’ಗಳು ಕೂಡಾ ದೊರಕುತ್ತವೆ. ಇವೆಲ್ಲ ಸಿಕ್ಕರೂ ಆತ ಸಮಾಧಾನ ಪಟ್ಟುಕೊಳ್ಳುವಂತಿಲ್ಲ. ಹಿಂದಿನವ ಆತನ ಬೆನ್ನತ್ತಿ ಬರುವುದನ್ನೂ ಬಿಡುವುದೇ ಇಲ್ಲ..

ಈ ಗೇಮ್ ಅನ್ನೇ ನಮ್ಮ ಕ್ರೀಡಾಪಟುಗಳಿಗೆ ರೂಪಕವಾಗಿ ತಗೆದುಕೊಳ್ಳಬಹುದು. ಮುಂದೆ ಓಡುತ್ತಿರುವವ ಆಟಗಾರನಾದರೇ ಹಿಂದೆ ಬೆನ್ನತ್ತಿರುವವ ‘ಗಾಯ’ಎಂಬೋ ಬ್ರಹ್ಮ ರಾಕ್ಷಸ ಎಂದುಕೊಳ್ಳಬಹುದು. ಎಷ್ಟೇ ಹುಷಾರಾಗಿದ್ದರೂ ಕೂಡ ಈ ಬ್ರಹ್ಮರಾಕ್ಷಸ ಎತ್ತಲಿಂದಾದರೂ ಧುತ್ತೆಂದು ಬಂದು ಕಣ್ಣ ಮುಂದೆ ಕ್ಷಣಾರ್ಧದಲ್ಲಿ ಕಾಣಿಸಿಕೊಳ್ಳುತ್ತಾನೆ. ಕಾಣಿಸಿಕೊಂಡವನೂ ಸುಮ್ಮನೆ ಹೋಗುವುದಿಲ್ಲ. ಆಟಗಾರರ ಭವಿಷ್ಯವನ್ನೇ ನಾಶ ಮಾಡುತ್ತಾನೆ.

ಭಾರತದಲ್ಲಿ ಅನೇಕ ಕ್ರೀಡಾಪಟುಗಳನ್ನು ‘ಗಾಯ’ ಇನ್ನಿಲ್ಲದಂತೆ ಕಾಡಿದೆ. ಕೆಲವರು ಇದರ ವಿರುದ್ಧ ಹೋರಾಡಿ ಮತ್ತೆ ಅಂಗಳಕ್ಕೆ ಬಂದರೂ ಮೊದಲಿನ ಪ್ರದರ್ಶನ ನೀಡಲು ಆಗದೇ ಒದ್ದಾಡಿದ್ದಾರೆ. ಇನ್ನೂ ಕೆಲವರಂತೂ ಇದರಿಂದ ರೋಸಿ ಹೋಗಿ ನಿವೃತ್ತಿಯಾದ ಉದಾಹರಣೆಗಳಿವೆ.

ಒಲಂಪಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಗೆರೆ ದಾಟಿದ ಹುಡುಗ ನೀರಜ್ ಚೋಪ್ರಾ ಗಾಯಗೊಂಡ ಕಾರಣ ಕಾಮನ್‌ವೆಲ್ತ್ ಗೇಮ್ ತಪ್ಪಿಸಿಕೊಂಡರು. ಚಿನ್ನದ ಭರವಸೆ ಇಟ್ಟಿದ್ದ ಲಕ್ಷಾಂತರ ಭಾರತೀಯರು ಮಮ್ಮುಲ ಮರುಗಿದರು. ಕ್ರಿಕೆಟ್ ದೇವರು ಸಚಿನ್ ಅವರನ್ನು ಬೆನ್ನುಹುರಿ ಸಮಸ್ಯೆ ‘ಬೇತಾಳ’ನಂತೆ ನೇತು ಹಾಕಿಕೊಂಡಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದು ಮತ್ತೆ ‘ಪಿಚ್’ಗೆ ಬಂದರೂ ಮೊದಲು ಹೊಡೆಯುತ್ತಿದ್ದ ‘ಶಾಟ್ಸ್’ಗಳು ಬತ್ತಳಿಕೆಯಿಂದ ಕಾಣೆಯಾಗಿದ್ದವು. ಬ್ಯಾಟಿನ ಭಾರವೂ ಕಡಿಮೆಯಾಗಿತ್ತು. ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ ವಿಜಯ ಭಾರದ್ವಾಜ್ ಆಡಿದ ಮೊದಲ ಅಂತಾರಾಷ್ಟ್ರೀಯ ಸರಣಿಯಲ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದುಕೊಂಡರು. ಗಾಯಾಳುವಾದರು ಮತ್ತೆ ಇಂಡಿಯಾ ಟೀಮ್ ಪ್ರತಿನಿಧಿಸಲೇ ಇಲ್ಲ.

ಚಿಕಿತ್ಸೆಯೊಂದಿಗೆ ಮನಸ್ಥೈರ್ಯ ತುಂಬಬೇಕು
ಕ್ರೀಡಾಪಟುಗಳು ಗಾಯಗೊಂಡ ಸಮಯದಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯವೋ ಅವರಿಗೆ ಮನಸ್ಥೈರ್ಯ ತುಂಬುದು ಅಷ್ಟೇ ಮುಖ್ಯ ಎನ್ನುತ್ತಾರೆ ಡಾ.ವಿಜಯ ಸ್ಯಾಮುವೆಲ್.

ಜೆಎಸ್‌ಎಸ್ ಫಿಜಿಯೋಥೆರಪಿ ಕಾಲೇಜಿನ ಕ್ರೀಡಾ ವಿಜ್ಞಾನದ ಮುಖ್ಯಸ್ಥರಾಗಿರುವ ಡಾ.ವಿಜಯ್ ಅವರು ಇಲ್ಲಿವರೆಗೆ ನೂರಾರು ಕ್ರೀಡಾಪಟುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಅವರಿಗೆ ಕೌನ್ಸಿಲಿಂಗ್ ಕೂಡಾ ಮಾಡಿದ್ದಾರೆ. ಅವರ ಅನುಭವದ ಪ್ರಕಾರ, ಗಾಯಗೊಂಡ ಸಮಯದಲ್ಲಿ ಮಾನಸಿಕ ಗೊಂದಲದಿಂದಾಗಿ ಕ್ರೀಡಾಪಟುಗಳು ಕುಗ್ಗಿ ಹೋಗಿರುತ್ತಾರೆ. ಭವಿಷ್ಯವೇನು ಎನ್ನುವ ಚಿಂತೆಯೂ ಮನಸ್ಸಿನಲ್ಲಿ ಓಡಾಡುತ್ತಿರುತ್ತದೆ. ಅಂತಹ ಸಮಯದಲ್ಲಿ ಅವರಿಗೆ ಸೂಕ್ತ ಆಪ್ತ ಸಮಾಲೋಚನೆ ನಡೆಸಿ, ಧೈರ್ಯ ತುಂಬಿದರೆ ಅವರು ಗಾಯವನ್ನು ಮರೆತು ಮೊದಲಿನ ಮಟ್ಟದಲ್ಲೇ ಪ್ರದರ್ಶನ ನೀಡುತ್ತಾರೆ ಎನ್ನುವುದಾಗಿದೆ.

ತಂತ್ರಜ್ಞಾನ ಬೆಳವಣಿಗೆಯಾಗಿರುವುದರಿಂದ ಗಾಯಗೊಂಡ ಕ್ರೀಡಾಪಟುಗಳನ್ನು ಪುನಶ್ಚೇತನಗೊಳಿಸುವ ಕ್ರಮವು ಮೊದಲಿಗಿಂತ ಹೆಚ್ಚು ಉತ್ತಮಗೊಂಡಿದೆ.ಮಾಂಸಖಂಡ, ಮೀನಖಂಡಗಳ ಸಾಮರ್ಥ್ಯವನ್ನು ನಿಖರವಾಗಿ ಅಳೆಯುವ ಉಪಕರಣಗಳು ಲಭ್ಯವಿರುವುದರಿಂದ ಕ್ರೀಡಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆತು ಮೊದಲಿನಂತೆ ಅವರು ಮೈದಾನಕ್ಕೆ ಧುಮುಕಬಹುದು ಎಂದರು.

ಇತ್ತೀಚೆಗೆ ನಡೆದ ಘಟನೆಯೊಂದನ್ನು ನೆನಪು ಮಾಡಿಕೊಂಡ ಸ್ಯಾಮುವೆಲ್ ಅವರು, ವಾಲಿಬಾಲ್ ಆಟಗಾರನೊಬ್ಬ ಗಾಯಗೊಂಡು ಆಸ್ಪತ್ರೆಗೆ ಬಂದ ಸಮಯದಲ್ಲಿ ತುಂಬ ಗಾಬರಿಯಾಗಿದ್ದರು. ಅವರಿಗೆ ಧೈರ್ಯ ತುಂಬಿ, ನೀವು ಮೊದಲಿನಂತೆ ಉತ್ತಮವಾಗಿ ಆಟವಾಡುತ್ತೀರಿ ಎಂದು ಭರವಸೆ ನೀಡಿ, ಚಿಕಿತ್ಸೆ ಮಾಡಲಾಯಿತು. ಅತಿ ಬೇಗನೆ ಚೇತರಿಸಿಕೊಂಡ ಅವರು, ಮತ್ತೆ ಮೈದಾನಕ್ಕೆ ಇಳಿದು ಉತ್ತಮವಾಗಿ ಆಟವಾಡಿ ತಮ್ಮ ತಂಡಕ್ಕೆ ಕಪ್ ಗೆದ್ದುಕೊಟ್ಟರು ಎಂದು ತಿಳಿಸಿದರು.

andolana

Recent Posts

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

55 mins ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…

2 hours ago

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…

2 hours ago

ರಾಜ್ಯದಲ್ಲಿ ಆಘಾತಕಾರಿ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…

3 hours ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ…

3 hours ago