ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.
ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…