ಆಂದೋಲನ ಪುರವಣಿ

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.

ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

1 hour ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

1 hour ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago