ಆಂದೋಲನ ಪುರವಣಿ

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.

ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

4 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago