ಆಂದೋಲನ ಪುರವಣಿ

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.

ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.

andolana

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

2 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

4 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

4 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

5 hours ago