ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.
ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…