ಆಂದೋಲನ ಪುರವಣಿ

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. ಕೊನೆಗೂ ತಲಪುವ ದಿನ ಇನ್ನೇನು ಬಂತು ಎನ್ನುವಷ್ಟರಲ್ಲಿ ಅವರೇ ಇನ್ನಿಲ್ಲವಾಗಿದ್ದರು. ಸಹಜವಾಗಿೆುೀಂ ಚಿತ್ರತಂಡಕ್ಕೆ ಇದು ಭಾರೀ ಆಘಾತ ನೀಡಿತ್ತು. ಇದೀಗ ಅವರ ಬದಲಿಗೆ ಮತ್ತೊಬ್ಬ ಜನಪ್ರಿಯ ನಟರು ಅವರ ಪಾತ್ರ ನಿರ್ವಹಿಸಿ, ಬೆಂಗಳೂರು ನಗರದ ಹೊರವಲಯದಲ್ಲಿ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ಚಿತ್ರಿಸುವುದರೊಂದಿಗೆ ಚಿತ್ರೀಕರಣ ಮುಗಿದಿದೆ.

ತಮ್ಮ ಹೊಯ್ಸಳ ಕ್ರಿಯೇಷನ್ಸ್ ಮೂಲಕ ಕೆ. ಆರ್. ಹೊಯ್ಸಳ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಕುಮಾರ್ ಅಸ್ಕಿ ನಿರ್ದೇಶಿಸುತ್ತಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದು, ಜನಪ್ರಿಯ ನಟರ ಹೆಸರನ್ನು ಮುಂದೆ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ. ಗಿರಿ ಛಾಯಾಗ್ರಹಣ, ದೇಸೀ ಮೋಹನ್ ಸಂಗೀತ ಸಂಯೋಜನೆ, ಶ್ರೀಕಾಂತ್ ಸಂಕಲನ, ವಾಗೀಶ್ ಚನ್ನಗಿರಿ ಗೀತ ರಚನೆ ಇದೆ.

andolana

Recent Posts

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

17 mins ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

5 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

5 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

5 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

5 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

5 hours ago