ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ ಬರಲಿದೆಯಂತೆ. ಸುಮನ್ ಬಾಬು ರಚನೆ, ನಿರ್ದೇಶನದ, ಸುಮನ್ ವೆಂಕಟಾದ್ರಿ ಪ್ರೊಡಕ್ಷನ್ ನಿರ್ಮಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರ ಕನ್ನಡವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ತೆರೆಗೆ ಬರಲಿದೆ ಎನ್ನುತ್ತಿದೆ ಚಿತ್ರತಂಡ. ಚಿತ್ರದಲ್ಲಿನ ಅಘೋರಿ ಪಾತ್ರದಲ್ಲಿ ಸಾಯಿಕುಮಾರ್ ಸೋದರ ಅಯ್ಯಪ್ಪ ಶರ್ಮ, ಜೊತೆಗೆ ಸುಮನ್ ಬಾಬು, ಕಾರುಣ್ಯ ಚೌಧರಿ, ಸಂಜನಶೆಟ್ಟಿ, ಆಲಿ, ಶ್ರೀಕಾಂತ್ (ಶ್ರೀರಾಮ್), ಅಜಯ್, ಜೀವಾ, ಬೇಬು ಸಾಯಿ ತೇಜಸ್ವಿನಿ ನಟಿಸಿದ್ದಾರೆ. ಪ್ರಮೋದ್ ರಾಗಸಂಯೋಜನೆ, ಚಿನ್ನು ಹಿನ್ನೆಲೆ ಸಂಗೀತ, ಚಂದ್ರು ಛಾಯಾಗ್ರಹಣ, ಸಂಗೋಪಿ ವಿಮಲ ಸಂಭಾಷಣೆ, ಅಜಯ್ ಶಿವಶಂಕರ್ ಅಕುಲ್ ನೃತ್ಯ ಸಂಯೋಜನೆ, ವೆಂಕಟಪ್ರಭು ಸಂಕಲನ ಈ ಚಿತ್ರಕ್ಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…