ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ ಬರಲಿದೆಯಂತೆ. ಸುಮನ್ ಬಾಬು ರಚನೆ, ನಿರ್ದೇಶನದ, ಸುಮನ್ ವೆಂಕಟಾದ್ರಿ ಪ್ರೊಡಕ್ಷನ್ ನಿರ್ಮಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರ ಕನ್ನಡವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ತೆರೆಗೆ ಬರಲಿದೆ ಎನ್ನುತ್ತಿದೆ ಚಿತ್ರತಂಡ. ಚಿತ್ರದಲ್ಲಿನ ಅಘೋರಿ ಪಾತ್ರದಲ್ಲಿ ಸಾಯಿಕುಮಾರ್ ಸೋದರ ಅಯ್ಯಪ್ಪ ಶರ್ಮ, ಜೊತೆಗೆ ಸುಮನ್ ಬಾಬು, ಕಾರುಣ್ಯ ಚೌಧರಿ, ಸಂಜನಶೆಟ್ಟಿ, ಆಲಿ, ಶ್ರೀಕಾಂತ್ (ಶ್ರೀರಾಮ್), ಅಜಯ್, ಜೀವಾ, ಬೇಬು ಸಾಯಿ ತೇಜಸ್ವಿನಿ ನಟಿಸಿದ್ದಾರೆ. ಪ್ರಮೋದ್ ರಾಗಸಂಯೋಜನೆ, ಚಿನ್ನು ಹಿನ್ನೆಲೆ ಸಂಗೀತ, ಚಂದ್ರು ಛಾಯಾಗ್ರಹಣ, ಸಂಗೋಪಿ ವಿಮಲ ಸಂಭಾಷಣೆ, ಅಜಯ್ ಶಿವಶಂಕರ್ ಅಕುಲ್ ನೃತ್ಯ ಸಂಯೋಜನೆ, ವೆಂಕಟಪ್ರಭು ಸಂಕಲನ ಈ ಚಿತ್ರಕ್ಕಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…