ಮೈಸೂರಿನ ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.4ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ.ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ.ಎಂ.ಸಿ.ಮನೋಹರ ನಾಟಕ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್.ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರ ವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾದನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ.
ನಾಟಕ ಸಾರಾಂಶ: ಸಲೀಂ ಅಲಿ ಚಿಕ್ಕವರಿದ್ದಾಗ ಅವರ ಚಿಕ್ಕಪ್ಪ ಏರ್ಗನ್ವೊಂದನ್ನು ಕೊಡುಗೆಯಾಗಿ ನೀಡುತ್ತಾರೆ. ಆ ಗನ್ನಿಂದ ಹಕ್ಕಿಯೊಂದನ್ನು ಹೊಡೆದು ಉರುಳಿಸುವ ಸಲೀಂ ಅಲಿ, ಆ ಹಕ್ಕಿ ಯಾವುದೆಂದು ತಿಳಿಯುವ ಕುತೂಹಲದಿಂದ ಬಾಂಬೆಯ ‘ನ್ಯಾಚುರಲ್ ಹಿಸ್ಟರಿ ಸೊಸೈಟಿ’ಗೆ ಭೇಟಿ ಕೊಡುತ್ತಾರೆ. ಆ ವೇಳೆ ಸೊಸೈಟಿ ಗೌರವ ಕಾರ್ಯದರ್ಶಿಯಾಗಿದ್ದ ಡಬ್ಲ್ಯೂ.ಎಸ್.ಮಿಲ್ಲಾರ್ಡನ್ ಅವರು, ಬಾಲಕ ಸಲೀಂ ಅಲಿಗೆ ಭಾರತೀಯ ಪಕ್ಷಿ ವೈವಿಧ್ಯತೆಯನ್ನು ಪರಿಚಯಿಸುತ್ತಾರೆ. ಈ ಒಂದೇ ಘಟನೆ ಅವರನ್ನು ಜೀವಮಾನವಿಡೀ ಪಕ್ಷಿಲೋಕದತ್ತ ಕರೆದೊಯ್ದುಬಿಡುತ್ತದೆ.
ನಂತರ ಅಧ್ಯಯನ, ಸಂಶೋಧನೆ, ಕ್ಷೇತ್ರ ಪ್ರವಾಸ, ಲೇಖನ-ಪುಸ್ತಕ ಬರಹ ಇನ್ನಿತರ ಚಟುವಟಿಕೆಗಳ ಮೂಲಕ ಭಾರತದಲ್ಲಿ ಪಕ್ಷಿಲೋಕದ ಅಧ್ಯಯನವನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಈ ನಡುವೆ ಗೆಳೆತನ, ನಿರುದ್ಯೋಗ, ವೃತ್ತಿ, ಕುಟುಂಬ ಸೇರಿದಂತೆ ಜೀವನದಲ್ಲಿ ಹಲವಾರು ಸಿಹಿ-ಕಹಿ ಘಟನೆಗಳನ್ನು ಅವರು ಎದುರಿಸಬೇಕಾಗುತ್ತದೆ. ಒಟ್ಟಾರೆ ಈ ನಾಟಕದಲ್ಲಿ ಸಲೀಂ ಅಲಿ ಅವರ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ. ವಿವರಗಳಿಗೆ ಮೊ.ಸಂ. 9880643458 ಸಂಪರ್ಕಿಸಬಹುದು.
ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…
ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…