ಮೈಸೂರಿನ ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.4ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ.ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ.ಎಂ.ಸಿ.ಮನೋಹರ ನಾಟಕ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್.ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರ ವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾದನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ.
ನಾಟಕ ಸಾರಾಂಶ: ಸಲೀಂ ಅಲಿ ಚಿಕ್ಕವರಿದ್ದಾಗ ಅವರ ಚಿಕ್ಕಪ್ಪ ಏರ್ಗನ್ವೊಂದನ್ನು ಕೊಡುಗೆಯಾಗಿ ನೀಡುತ್ತಾರೆ. ಆ ಗನ್ನಿಂದ ಹಕ್ಕಿಯೊಂದನ್ನು ಹೊಡೆದು ಉರುಳಿಸುವ ಸಲೀಂ ಅಲಿ, ಆ ಹಕ್ಕಿ ಯಾವುದೆಂದು ತಿಳಿಯುವ ಕುತೂಹಲದಿಂದ ಬಾಂಬೆಯ ‘ನ್ಯಾಚುರಲ್ ಹಿಸ್ಟರಿ ಸೊಸೈಟಿ’ಗೆ ಭೇಟಿ ಕೊಡುತ್ತಾರೆ. ಆ ವೇಳೆ ಸೊಸೈಟಿ ಗೌರವ ಕಾರ್ಯದರ್ಶಿಯಾಗಿದ್ದ ಡಬ್ಲ್ಯೂ.ಎಸ್.ಮಿಲ್ಲಾರ್ಡನ್ ಅವರು, ಬಾಲಕ ಸಲೀಂ ಅಲಿಗೆ ಭಾರತೀಯ ಪಕ್ಷಿ ವೈವಿಧ್ಯತೆಯನ್ನು ಪರಿಚಯಿಸುತ್ತಾರೆ. ಈ ಒಂದೇ ಘಟನೆ ಅವರನ್ನು ಜೀವಮಾನವಿಡೀ ಪಕ್ಷಿಲೋಕದತ್ತ ಕರೆದೊಯ್ದುಬಿಡುತ್ತದೆ.
ನಂತರ ಅಧ್ಯಯನ, ಸಂಶೋಧನೆ, ಕ್ಷೇತ್ರ ಪ್ರವಾಸ, ಲೇಖನ-ಪುಸ್ತಕ ಬರಹ ಇನ್ನಿತರ ಚಟುವಟಿಕೆಗಳ ಮೂಲಕ ಭಾರತದಲ್ಲಿ ಪಕ್ಷಿಲೋಕದ ಅಧ್ಯಯನವನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಈ ನಡುವೆ ಗೆಳೆತನ, ನಿರುದ್ಯೋಗ, ವೃತ್ತಿ, ಕುಟುಂಬ ಸೇರಿದಂತೆ ಜೀವನದಲ್ಲಿ ಹಲವಾರು ಸಿಹಿ-ಕಹಿ ಘಟನೆಗಳನ್ನು ಅವರು ಎದುರಿಸಬೇಕಾಗುತ್ತದೆ. ಒಟ್ಟಾರೆ ಈ ನಾಟಕದಲ್ಲಿ ಸಲೀಂ ಅಲಿ ಅವರ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ. ವಿವರಗಳಿಗೆ ಮೊ.ಸಂ. 9880643458 ಸಂಪರ್ಕಿಸಬಹುದು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…