ಆಂದೋಲನ ಪುರವಣಿ

ಮೈಸೂರಿನಲ್ಲಿ ಟ್ರೇಡ್ ಲೈಸೆನ್ಸ್ ನವೀಕರಿಸುವುದು ಇನ್ನು ಸುಲಭ

ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ

ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಬಾಗಿಲು ತಟ್ಟಬೇಕಿತ್ತು. ಆದರೆ ಮೈಸೂರು ಮಹಾನಗರ ಪಾಲಿಗೆ ನೂತನ ಹೆಜ್ಜೆ ಇಟ್ಟಿದ್ದು, ಇದು ವ್ಯಾಪಾರ ಸ್ನೇಹಿ ನಡೆಯಾಗಿದೆ.

ಮೇಯರ್ ಶಿವಕುಮಾರ್ ನೇತೃತ್ವದಲ್ಲಿ ಮೊನ್ನೆ ಮೊನ್ನೆ ನಡೆದ ಸಭೆಯಲ್ಲಿ ಆನ್‌ಲೈನ್‌ನಲ್ಲಿಯೇ ಟ್ರೇಡ್ ಲೈಸೆನ್ಸ್ ನವೀಕರಣ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಇನ್ನು ಮುಂದೆ ವ್ಯಾಪಾರಿಗಳು ಆನ್‌ಲೈನ್‌ನಲ್ಲಿಯೇ ನಿಗದಿತ ಶುಲ್ಕ ಪಾವತಿ ಮಾಡಿ ತಮ್ಮ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬಹುದಾಗಿದೆ.

ನವೀಕರಣ ಪ್ರಕ್ರಿಯೆ ಹೇಗೆ?

https://mysurucitycorporation.co.in/

  • ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್ ಸೇವೆಗಳನ್ನು ಆಯ್ಕೆ ಮಾಡಬೇಕು.
  • ಉದ್ದಿಮೆ ರಹದಾರಿ ಆನ್‌ಲೈನ್ ಸೇವೆ ಆಯ್ಕೆ ಮಾಡುವುದು
  • ಉದ್ದಿಮೆ ಪರವಾನಗಿ ಗುರುತಿನ ಸಂಖ್ಯೆಯನ್ನು ನಮೂದಿಸುವುದು.
  • ಪರದೆಯ ಮೇಲೆ ಕಾಣುವ ಸರ್ಜ್ ಮತ್ತು ವೀವ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • ಶುಲ್ಕ ಪಾವತಿ ಆಯ್ಕೆ ಕಂಪ್ಯೂಟರ್ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ. ಆಗ ಇಮೇಲ್ ಐಡಿ, ದೂರವಾಣಿ ಸಂಖ್ಯೆ ನಮೂದಿಸುವುದು.
  • ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡುವುದು (ನೆಟ್ ಬ್ಯಾಂಕಿಂಗ್, ಯುಪಿಐ) ನಂತರ ಶುಲ್ಕ ಪಾವತಿ ಮಾಡುವುದು.
  • ನಂತರ ಬರುವ ಡೌನ್‌ಲೋಡ್ ಪ್ರಮಾಣ ಪತ್ರದ ಮೇಲೆ ಕ್ಲಿಕ್ಕಿಸಿ ನಿಮ್ಮ ಉದ್ಯಮದ ನವೀಕರಣ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.

ಆನ್‌ಲೈನ್ ಸೇವೆಯಿಂದ ಆಗುವ ಅನುಕೂಲಗಳು

  • ಉದ್ದಿಮೆದಾರರು ಸ್ಥಳದಲ್ಲಿಯೇ ಕುಳಿತು ಉದ್ದಿಮೆ ರಹದಾರಿ ನವೀಕರಣ ಮಾಡಿಕೊಳ್ಳಬಹುದು.
  • ಮಧ್ಯವರ್ತಿಗಳ ಸಹಾಯವಿಲ್ಲದೇ ಸರಳ ವಿಧಾನದ ಮೂಲಕ ನವೀಕರಣ ಸಾಧ್ಯ.
  • ಇದು ಕಾಗದ ರಹಿತ ವ್ಯವಸ್ಥೆಯಾಗಿದ್ದು, ಪರಿಸರ ಸ್ನೇಹಿ.
  • ಇ-ತಂತ್ರಾಂಶ ವ್ಯವಸ್ಥೆಯಿಂದ ವ್ಯವಹಾರದಲ್ಲಿ ಪಾರದರ್ಶಕತೆ.
  • ಇದರಿಂದ ಉದ್ದಿಮೆದಾರರ ಸಮಯ ಉಳಿತಾಯ, ಅಲೆದಾಟವೂ ತಪ್ಪುತ್ತದೆ.
  • ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಆನ್‌ಲೈನ್‌ನಲ್ಲಿಯೇ ಪಡೆಯಬಹುದು.
  • ಒಮ್ಮೆ ಆನ್‌ಲೈನ್ ನವೀಕರಣ ಆದ ಮೇಲೆ ಎಸ್‌ಎಂಎಸ್ ಮೂಲಕವೇ ಮುಂದಿನ ನವೀಕರಣ, ಶುಲ್ಕ ಪಾವತಿ ಬಗ್ಗೆ ಮಾಹಿತಿ ದೊರೆಯುತ್ತದೆ.
  • ಇದರಿಂದ ಪಾಲಿಗೆ ಅಧಿಕಾರಿಗಳಿಗೂ ಸಮಯ ಉಳಿತಾಯ, ಆದಾಯ ಸೋರಿಕೆಯೂ ತಪ್ಪಲಿದೆ.

ಮೈಸೂರಿನಲ್ಲಿ ವ್ಯಾಪಾರಸ್ಥರಿಗೆ ಟ್ರೇಡ್ ಲೈಸೆನ್ಸ್ ಪಡೆಯಲು ಇದ್ದ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗಿದೆ. ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್ ಲೈಸೆನ್ಸ್ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್ ಕೂಡ ಪಡೆಯಬಹುದಾಗಿದೆ. -ಶಿವಕುವಾರ್, ಮಹಾಪೌರರು, ಮೈಸೂರು ಮಹಾನಗರಪಾಲಿಕೆ

andolana

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

7 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

9 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

12 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

16 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

20 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

20 hours ago