ಆಂದೋಲನ ಪುರವಣಿ

ಮೈಸೂರಿನಲ್ಲಿ ಟ್ರೇಡ್ ಲೈಸೆನ್ಸ್ ನವೀಕರಿಸುವುದು ಇನ್ನು ಸುಲಭ

ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ

ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಬಾಗಿಲು ತಟ್ಟಬೇಕಿತ್ತು. ಆದರೆ ಮೈಸೂರು ಮಹಾನಗರ ಪಾಲಿಗೆ ನೂತನ ಹೆಜ್ಜೆ ಇಟ್ಟಿದ್ದು, ಇದು ವ್ಯಾಪಾರ ಸ್ನೇಹಿ ನಡೆಯಾಗಿದೆ.

ಮೇಯರ್ ಶಿವಕುಮಾರ್ ನೇತೃತ್ವದಲ್ಲಿ ಮೊನ್ನೆ ಮೊನ್ನೆ ನಡೆದ ಸಭೆಯಲ್ಲಿ ಆನ್‌ಲೈನ್‌ನಲ್ಲಿಯೇ ಟ್ರೇಡ್ ಲೈಸೆನ್ಸ್ ನವೀಕರಣ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಇನ್ನು ಮುಂದೆ ವ್ಯಾಪಾರಿಗಳು ಆನ್‌ಲೈನ್‌ನಲ್ಲಿಯೇ ನಿಗದಿತ ಶುಲ್ಕ ಪಾವತಿ ಮಾಡಿ ತಮ್ಮ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬಹುದಾಗಿದೆ.

ನವೀಕರಣ ಪ್ರಕ್ರಿಯೆ ಹೇಗೆ?

https://mysurucitycorporation.co.in/

  • ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್ ಸೇವೆಗಳನ್ನು ಆಯ್ಕೆ ಮಾಡಬೇಕು.
  • ಉದ್ದಿಮೆ ರಹದಾರಿ ಆನ್‌ಲೈನ್ ಸೇವೆ ಆಯ್ಕೆ ಮಾಡುವುದು
  • ಉದ್ದಿಮೆ ಪರವಾನಗಿ ಗುರುತಿನ ಸಂಖ್ಯೆಯನ್ನು ನಮೂದಿಸುವುದು.
  • ಪರದೆಯ ಮೇಲೆ ಕಾಣುವ ಸರ್ಜ್ ಮತ್ತು ವೀವ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • ಶುಲ್ಕ ಪಾವತಿ ಆಯ್ಕೆ ಕಂಪ್ಯೂಟರ್ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ. ಆಗ ಇಮೇಲ್ ಐಡಿ, ದೂರವಾಣಿ ಸಂಖ್ಯೆ ನಮೂದಿಸುವುದು.
  • ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡುವುದು (ನೆಟ್ ಬ್ಯಾಂಕಿಂಗ್, ಯುಪಿಐ) ನಂತರ ಶುಲ್ಕ ಪಾವತಿ ಮಾಡುವುದು.
  • ನಂತರ ಬರುವ ಡೌನ್‌ಲೋಡ್ ಪ್ರಮಾಣ ಪತ್ರದ ಮೇಲೆ ಕ್ಲಿಕ್ಕಿಸಿ ನಿಮ್ಮ ಉದ್ಯಮದ ನವೀಕರಣ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.

ಆನ್‌ಲೈನ್ ಸೇವೆಯಿಂದ ಆಗುವ ಅನುಕೂಲಗಳು

  • ಉದ್ದಿಮೆದಾರರು ಸ್ಥಳದಲ್ಲಿಯೇ ಕುಳಿತು ಉದ್ದಿಮೆ ರಹದಾರಿ ನವೀಕರಣ ಮಾಡಿಕೊಳ್ಳಬಹುದು.
  • ಮಧ್ಯವರ್ತಿಗಳ ಸಹಾಯವಿಲ್ಲದೇ ಸರಳ ವಿಧಾನದ ಮೂಲಕ ನವೀಕರಣ ಸಾಧ್ಯ.
  • ಇದು ಕಾಗದ ರಹಿತ ವ್ಯವಸ್ಥೆಯಾಗಿದ್ದು, ಪರಿಸರ ಸ್ನೇಹಿ.
  • ಇ-ತಂತ್ರಾಂಶ ವ್ಯವಸ್ಥೆಯಿಂದ ವ್ಯವಹಾರದಲ್ಲಿ ಪಾರದರ್ಶಕತೆ.
  • ಇದರಿಂದ ಉದ್ದಿಮೆದಾರರ ಸಮಯ ಉಳಿತಾಯ, ಅಲೆದಾಟವೂ ತಪ್ಪುತ್ತದೆ.
  • ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಆನ್‌ಲೈನ್‌ನಲ್ಲಿಯೇ ಪಡೆಯಬಹುದು.
  • ಒಮ್ಮೆ ಆನ್‌ಲೈನ್ ನವೀಕರಣ ಆದ ಮೇಲೆ ಎಸ್‌ಎಂಎಸ್ ಮೂಲಕವೇ ಮುಂದಿನ ನವೀಕರಣ, ಶುಲ್ಕ ಪಾವತಿ ಬಗ್ಗೆ ಮಾಹಿತಿ ದೊರೆಯುತ್ತದೆ.
  • ಇದರಿಂದ ಪಾಲಿಗೆ ಅಧಿಕಾರಿಗಳಿಗೂ ಸಮಯ ಉಳಿತಾಯ, ಆದಾಯ ಸೋರಿಕೆಯೂ ತಪ್ಪಲಿದೆ.

ಮೈಸೂರಿನಲ್ಲಿ ವ್ಯಾಪಾರಸ್ಥರಿಗೆ ಟ್ರೇಡ್ ಲೈಸೆನ್ಸ್ ಪಡೆಯಲು ಇದ್ದ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗಿದೆ. ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್ ಲೈಸೆನ್ಸ್ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್ ಕೂಡ ಪಡೆಯಬಹುದಾಗಿದೆ. -ಶಿವಕುವಾರ್, ಮಹಾಪೌರರು, ಮೈಸೂರು ಮಹಾನಗರಪಾಲಿಕೆ

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago