ಆಂದೋಲನ ಪುರವಣಿ

‘ವಿಕ್ರಾಂತ ರೋಣ’ ಜೊತೆ ಮತ್ತೆರಡು ಈ ವಾರ

‘ವಿಕ್ರಾಂತ್ ರೋಣ’

ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ. ಶಾಲಿನಿ ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅವರಿಗೆ ಅಲಂಕಾರ್ ಪಾಂಡ್ಯನ್ ನೆರವಾಗಿದ್ದಾರೆ. ಅನುಪ್ ಭಂಡಾರಿ ರಚನೆ, ನಿರ್ದೇಶನದ ಈ ಚಿತ್ರದ ಶೀರ್ಷಿಕಾ ಪಾತ್ರ ವಿಕ್ರಾಂತ್ ರೋಣ ಆಗಿ ಸುದೀಪ್ ನಟಿಸಿದ್ದಾರೆ. ಅವರೊಂದಿಗೆ ನಿರೂಪ್ ಭಂಡಾರಿ, ನೀತಾ ಅಶೋಕ, ಜಾಕ್ವೆಲಿನ್ ಫನಾರ್ಂಡಿಸ್, ರವಿಶಂಕರ್ ಗೌಡ, ಜನಾರ್ದನ್, ವಾಸುಕಿ ವೈಭವ್ ಇದ್ದಾರೆ. ಬಿ.ಅಜನೀಶ್ ಲೋಕನಾಥ್ ಸಂಗೀತ ಸಂೋಂಜನೆ, ವಿಲಿಯಂ ಡೇವಿಡ್ ಛಾಯಾಗ್ರಹಣ, ಆಶಿಕ್ ಕುಸುಗೊಳ್ಳಿ ಸಂಕಲನ ಇದೆ. ೩ಡಿ ತಂತ್ರಜ್ಞಾನದಲ್ಲಿ ತೆರೆಕಾಣುತ್ತಿರುವ ಈ ಚಿತ್ರ ೨ ಡಿಯಲ್ಲೂ ಲಭ್ಯವಿದೆ. ವಿಶ್ವಾದ್ಯಂತ ಈ ಚಿತ್ರ ತೆರೆಕಾಣುತ್ತಿದ್ದು ನಿರ್ಮಾಪಕ ಜಾಕ್ ಮಂಜು ಅವರ ಮೈಸೂರು ಟಾಕೀಸ್ ಜೊತೆ ಟಿ ಸೀರೀಸ್, ಸಲ್ಮಾನ್ ಖಾನ್ ಫಿಲ್ಸ್ತ್ಯ್ಮ್, ಜೀ ಸ್ಟುಡಿೋಂಸ್, ಪಿವಿಆರ್ ಸಿನಿಮಾಸ್, ಒನ್ ಟ್ವೆಂಟಿ ೮ ಮಾಧ್ಯಮ ಮುಂತಾದ ಸಂಸ್ಥೆಗಳು ಹಂಚಿಕೆ, ಪ್ರಸಾರಕ್ಕಾಗಿ ಕೈಗೂಡಿಸಿವೆ. ಸಿನೆ ಡಬ್  ಆಪ್ ತಮ್ಮ ಮೊಬೈಲ್‌ನಲ್ಲಿ ಇಳಿಸಿಕೊಂಡರೆ, ಪ್ರೇಕ್ಷಕರು ಚಿತ್ರಮಂದಿರದಲ್ಲಿ ಈ ಚಿತ್ರವನ್ನು ಅದು ಡಬ್ ಆದ ಯಾವುದೇ ಭಾಷೆಯಲ್ಲಿ ನೋಡಲು ಸಾಧ್ಯ. ‘ವಿಕ್ರಾಂತ್ ರೋಣ’ ಹಲವು ಮೊದಲುಗಳನ್ನು ದಾಖಲಿಸಿಕೊಂಡಿದ್ದು, ಎನ್‌ಎಫ್‌ಟಿ ಮೂಲಕ, ಮೊದಲ ಬಾರಿಗೆ ಪ್ರೀಮಿಯರ್ ಪ್ರದರ್ಶನವನ್ನು ಮೊನ್ನೆ ದುಬೈಯಲ್ಲಿ ನಡೆಸಿತ್ತು.


‘ಬೈಪಾಸ್ ರಸ್ತೆ’

ಎಂಟಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಭರತ್‌ರಾಜ್ ಎಂ. ಮತ್ತು ಮಹೇಶ್ ಬಿ.ಎನ್.ನಿರ್ಮಿಸಿರುವ ಚಿತ್ರ ‘ಬೈಪಾಸ್ ರಸ್ತೆ’. ಎಸ್.ಬಿ.ಶ್ರೀನಿವಾಸ್ ನಿರ್ದೇಶನದ ಈ ಚಿತ್ರ ಬೈಪಾಸ್ ರಸ್ತೆಯಲ್ಲಿ ಪ್ರಯಾಣ ಮಾಡಿದ ದಂಪತಿಯ ಜೀವನದಲ್ಲಿ ನಡೆದ ಘಟನಾವಳಿಗಳ ಕಥೆ ಎನ್ನಲಾಗಿದ್ದು, ೨೦೧೭ರಲ್ಲೇ ಇದು ಸಿದ್ಧವಾಗಿತ್ತು. ವಿರಂಜನ ಬಾಬು ಛಾಯಾಗ್ರಹಣ, ವಿಜಯಕೃಷ್ಣ ಡಿ ಸಂಗೀತ ಸಂೋಂಜನೆಯ ಈ ಚಿತ್ರದ ತಾರಾಗಣದಲ್ಲಿ ಭರತ್‌ಕುಮಾರ್, ತಿಲಕ್, ಚಿಕ್ಕಣ್ಣ, ನೇಹಾ ಸಕ್ಸೇನಾ, ನೀತು ಗೌಡ, ಮಾಸ್ಟರ್ ತಬಲಾನಾಣಿ, ಉಗ್ರಂ ಮಂಜು, ಕುರಿ ರಂಗ ಮುಂತಾದವರಿದ್ದಾರೆ.


‘ರಕ್ಕಂ’

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ನಿರ್ಮಿಸಿರುವ ಚಿತ್ರ ‘ರಕ್ಕಂ’. ಕೆ.ಸೆಂದಿಲ್ ನಿರ್ದೇಶನದ ಈ ಚಿತ್ರ ಪ್ರಧಾನಮಂತ್ರಿಗಳು ಡಿಮಾನಿಟೈಸೇಶನ್ ಮಾಡಿದ ಸಮಯದಲ್ಲಿ ಹುಟ್ಡಿದ ಕಥೆಯಂತೆ.
ರಣಧೀರ್ ಗೌಡ ಮುಖ್ಯಭೂಮಿಕೆಯಲ್ಲಿದ್ದು, ಅವರೊಂದಿಗೆ ಅಮೃತ ನಾಯರ್, ನಂಜಪ್ಪ ಬೆನಕ, ಬಿ.ರಾಮಮೂರ್ತಿ, ವಿನಯ್ ಪಾಂಡವಪುರ, ದಯಾನಂದ್ ಮೊದಲಾದವರು ತಾರಾಗಣದಲ್ಲಿದ್ದಾರೆ.
ಶ್ಯಾಮ್ ಛಾಯಾಗ್ರಹಣ, ಶ್ರೀವತ್ಸ ಸಂಗೀತ ಸಂೋಂಜನೆ, ಚಾಮರಾಜ್, ಅರುಣ್ ನೃತ್ಯ ಸಂೋಂಜನೆ ಇದೆ. ಸಂದೇಶ್ ಕಾರ್ಯನಿರ್ವಾಹಕ ನಿರ್ಮಾಪಕರು.

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

9 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

9 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

9 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

9 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

10 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago