ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ ಆಫ್ ದ ಮ್ಯಾಚ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ ಜೊತೆಗಿತ್ತು. ಅದು ಅವರ ನಿರ್ಮಾಣದ ಚಿತ್ರವೂ ಹೌದು. ಅವರ ಜೊತೆ ಡಿ ಮಂಜುನಾಥ್ ನಿರ್ಮಾಪಕರಾಗಿ ಜೊತೆಗಿದ್ದರು. ‘ರಾಮಾ ರಾಮ ರೇ’, ‘ಒಂದಲ್ಲ ಎರಡಲ್ಲ’ ಚಿತ್ರಗಳ ಮೂಲಕ ತಮ್ಮದು ಚಿತ್ರರಂಗದ ಮಾಮೂಲಿ ಹಾದಿಯಲ್ಲ ಎನ್ನುವುದನ್ನು ಹೇಳಿದ್ದ ಸತ್ಯಪ್ರಕಾಶ್ ಅವರ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೊದಲ ನೋಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಪುನೀತ್ ಅಗಲಿಕೆಯ ನಂತರ ಪಿಆರ್ಕೆ ಸಂಸ್ಥೆಯ ಆಶಯದೊಂದಿಗೆ ಮುಂದುವರಿಯುತ್ತಿರುವ ಅಶ್ವಿನಿ ಅವರು ಸಿನಿಮಾ ಸಮಾರಂಭದಲ್ಲಿ ಪಾಲ್ಗೊಂಡದ್ದು ಇದೇ ಮೊದಲು.
ಸತ್ಯ ಮೂವೀಸ್ ಮತ್ತು ಮಯೂರ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸುತ್ತಿರುವ ಹೊಸ ಚಿತ್ರ ‘ಅನ್ಲಾಕ್ ರಾಘವ’. ಈ ಚಿತ್ರದ ರಚನೆ ಸತ್ಯಪ್ರಕಾಶ್ ಅವರದಾದರೆ, ನಿರ್ದೇಶಿಸುವುದು ದೀಪಕ್ ಮಧುವನಹಳ್ಳಿ. ಸತ್ಯಪ್ರಕಾಶ್ ಪ್ರಕಾರ ಇದು ನಿಜವಾದ ಕಮರ್ಶಿಯಲ್ ಚಿತ್ರ. ಇದು ಹಾಸ್ಯ ಪ್ರಧಾನ ಪ್ರೇಮಕಥೆಯಾಗಿದ್ದು, ಇದರ ಮುಖ್ಯಪಾತ್ರಧಾರಿ ನಿರ್ಮಾಪಕ ಮಂಜುನಾಥ್ ಅವರ ಮಗ, ‘ವೀಕೆಂಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್. ಅವರ ಜೋಡಿಯಾಗಿ ರೇಚಲ್ ಡೇವಿಡ್, ಜೊತೆಗೆ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದವರಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನ ಇರಲಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…