ಆಂದೋಲನ ಪುರವಣಿ

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ ಆಫ್ ದ ಮ್ಯಾಚ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಜೊತೆಗಿತ್ತು. ಅದು ಅವರ ನಿರ್ಮಾಣದ ಚಿತ್ರವೂ ಹೌದು. ಅವರ ಜೊತೆ ಡಿ ಮಂಜುನಾಥ್ ನಿರ್ಮಾಪಕರಾಗಿ ಜೊತೆಗಿದ್ದರು. ‘ರಾಮಾ ರಾಮ ರೇ’, ‘ಒಂದಲ್ಲ ಎರಡಲ್ಲ’ ಚಿತ್ರಗಳ ಮೂಲಕ ತಮ್ಮದು ಚಿತ್ರರಂಗದ ಮಾಮೂಲಿ ಹಾದಿಯಲ್ಲ ಎನ್ನುವುದನ್ನು ಹೇಳಿದ್ದ ಸತ್ಯಪ್ರಕಾಶ್ ಅವರ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೊದಲ ನೋಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಪುನೀತ್ ಅಗಲಿಕೆಯ ನಂತರ ಪಿಆರ್‌ಕೆ ಸಂಸ್ಥೆಯ ಆಶಯದೊಂದಿಗೆ ಮುಂದುವರಿಯುತ್ತಿರುವ ಅಶ್ವಿನಿ ಅವರು ಸಿನಿಮಾ ಸಮಾರಂಭದಲ್ಲಿ ಪಾಲ್ಗೊಂಡದ್ದು ಇದೇ ಮೊದಲು.

ಸತ್ಯ ಮೂವೀಸ್ ಮತ್ತು ಮಯೂರ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸುತ್ತಿರುವ ಹೊಸ ಚಿತ್ರ ‘ಅನ್‌ಲಾಕ್ ರಾಘವ’. ಈ ಚಿತ್ರದ ರಚನೆ ಸತ್ಯಪ್ರಕಾಶ್ ಅವರದಾದರೆ, ನಿರ್ದೇಶಿಸುವುದು ದೀಪಕ್ ಮಧುವನಹಳ್ಳಿ. ಸತ್ಯಪ್ರಕಾಶ್ ಪ್ರಕಾರ ಇದು ನಿಜವಾದ ಕಮರ್ಶಿಯಲ್ ಚಿತ್ರ. ಇದು ಹಾಸ್ಯ ಪ್ರಧಾನ ಪ್ರೇಮಕಥೆಯಾಗಿದ್ದು, ಇದರ ಮುಖ್ಯಪಾತ್ರಧಾರಿ ನಿರ್ಮಾಪಕ ಮಂಜುನಾಥ್ ಅವರ ಮಗ, ‘ವೀಕೆಂಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್. ಅವರ ಜೋಡಿಯಾಗಿ ರೇಚಲ್ ಡೇವಿಡ್, ಜೊತೆಗೆ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದವರಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನ ಇರಲಿದೆ.

andolana

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

4 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

5 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

5 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

6 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

6 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

8 hours ago