ಆಂದೋಲನ ಪುರವಣಿ

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ ಆಫ್ ದ ಮ್ಯಾಚ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಜೊತೆಗಿತ್ತು. ಅದು ಅವರ ನಿರ್ಮಾಣದ ಚಿತ್ರವೂ ಹೌದು. ಅವರ ಜೊತೆ ಡಿ ಮಂಜುನಾಥ್ ನಿರ್ಮಾಪಕರಾಗಿ ಜೊತೆಗಿದ್ದರು. ‘ರಾಮಾ ರಾಮ ರೇ’, ‘ಒಂದಲ್ಲ ಎರಡಲ್ಲ’ ಚಿತ್ರಗಳ ಮೂಲಕ ತಮ್ಮದು ಚಿತ್ರರಂಗದ ಮಾಮೂಲಿ ಹಾದಿಯಲ್ಲ ಎನ್ನುವುದನ್ನು ಹೇಳಿದ್ದ ಸತ್ಯಪ್ರಕಾಶ್ ಅವರ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೊದಲ ನೋಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಪುನೀತ್ ಅಗಲಿಕೆಯ ನಂತರ ಪಿಆರ್‌ಕೆ ಸಂಸ್ಥೆಯ ಆಶಯದೊಂದಿಗೆ ಮುಂದುವರಿಯುತ್ತಿರುವ ಅಶ್ವಿನಿ ಅವರು ಸಿನಿಮಾ ಸಮಾರಂಭದಲ್ಲಿ ಪಾಲ್ಗೊಂಡದ್ದು ಇದೇ ಮೊದಲು.

ಸತ್ಯ ಮೂವೀಸ್ ಮತ್ತು ಮಯೂರ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸುತ್ತಿರುವ ಹೊಸ ಚಿತ್ರ ‘ಅನ್‌ಲಾಕ್ ರಾಘವ’. ಈ ಚಿತ್ರದ ರಚನೆ ಸತ್ಯಪ್ರಕಾಶ್ ಅವರದಾದರೆ, ನಿರ್ದೇಶಿಸುವುದು ದೀಪಕ್ ಮಧುವನಹಳ್ಳಿ. ಸತ್ಯಪ್ರಕಾಶ್ ಪ್ರಕಾರ ಇದು ನಿಜವಾದ ಕಮರ್ಶಿಯಲ್ ಚಿತ್ರ. ಇದು ಹಾಸ್ಯ ಪ್ರಧಾನ ಪ್ರೇಮಕಥೆಯಾಗಿದ್ದು, ಇದರ ಮುಖ್ಯಪಾತ್ರಧಾರಿ ನಿರ್ಮಾಪಕ ಮಂಜುನಾಥ್ ಅವರ ಮಗ, ‘ವೀಕೆಂಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್. ಅವರ ಜೋಡಿಯಾಗಿ ರೇಚಲ್ ಡೇವಿಡ್, ಜೊತೆಗೆ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದವರಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನ ಇರಲಿದೆ.

andolana

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

6 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

10 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

11 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

11 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

11 hours ago