ಆಂದೋಲನ ಪುರವಣಿ

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ ಆಫ್ ದ ಮ್ಯಾಚ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಜೊತೆಗಿತ್ತು. ಅದು ಅವರ ನಿರ್ಮಾಣದ ಚಿತ್ರವೂ ಹೌದು. ಅವರ ಜೊತೆ ಡಿ ಮಂಜುನಾಥ್ ನಿರ್ಮಾಪಕರಾಗಿ ಜೊತೆಗಿದ್ದರು. ‘ರಾಮಾ ರಾಮ ರೇ’, ‘ಒಂದಲ್ಲ ಎರಡಲ್ಲ’ ಚಿತ್ರಗಳ ಮೂಲಕ ತಮ್ಮದು ಚಿತ್ರರಂಗದ ಮಾಮೂಲಿ ಹಾದಿಯಲ್ಲ ಎನ್ನುವುದನ್ನು ಹೇಳಿದ್ದ ಸತ್ಯಪ್ರಕಾಶ್ ಅವರ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೊದಲ ನೋಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಪುನೀತ್ ಅಗಲಿಕೆಯ ನಂತರ ಪಿಆರ್‌ಕೆ ಸಂಸ್ಥೆಯ ಆಶಯದೊಂದಿಗೆ ಮುಂದುವರಿಯುತ್ತಿರುವ ಅಶ್ವಿನಿ ಅವರು ಸಿನಿಮಾ ಸಮಾರಂಭದಲ್ಲಿ ಪಾಲ್ಗೊಂಡದ್ದು ಇದೇ ಮೊದಲು.

ಸತ್ಯ ಮೂವೀಸ್ ಮತ್ತು ಮಯೂರ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸುತ್ತಿರುವ ಹೊಸ ಚಿತ್ರ ‘ಅನ್‌ಲಾಕ್ ರಾಘವ’. ಈ ಚಿತ್ರದ ರಚನೆ ಸತ್ಯಪ್ರಕಾಶ್ ಅವರದಾದರೆ, ನಿರ್ದೇಶಿಸುವುದು ದೀಪಕ್ ಮಧುವನಹಳ್ಳಿ. ಸತ್ಯಪ್ರಕಾಶ್ ಪ್ರಕಾರ ಇದು ನಿಜವಾದ ಕಮರ್ಶಿಯಲ್ ಚಿತ್ರ. ಇದು ಹಾಸ್ಯ ಪ್ರಧಾನ ಪ್ರೇಮಕಥೆಯಾಗಿದ್ದು, ಇದರ ಮುಖ್ಯಪಾತ್ರಧಾರಿ ನಿರ್ಮಾಪಕ ಮಂಜುನಾಥ್ ಅವರ ಮಗ, ‘ವೀಕೆಂಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್. ಅವರ ಜೋಡಿಯಾಗಿ ರೇಚಲ್ ಡೇವಿಡ್, ಜೊತೆಗೆ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದವರಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನ ಇರಲಿದೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago